Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈಕಾಲು ಕತ್ತರಿಸುವ ಶಿಕ್ಷೆ ಇದ್ದರಷ್ಟೇ ಜನರು ಕಾನೂನು ಪಾಲಿಸುತ್ತಾರೆನೋ : ಹೈಕೋರ್ಟ್ ನ್ಯಾಯಮೂರ್ತಿ 

Advertisement

ಬೆಂಗಳೂರು: ಮಧ್ಯ ಪ್ರಾಚ್ಯ ದೇಶಗಳ ರೀತಿಯಲ್ಲಿ ಭಾರತದಲ್ಲಿಯೂ ಕೈಕಾಲು ಕತ್ತರಿಸುವ ಶಿಕ್ಷೆ ಇದ್ದರಷ್ಟೇ ಜನರು ಕಾನೂನು ಪಾಲಿಸುತ್ತಾರೆನೋ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಆರ್. ನಟರಾಜ್ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ರಜಾ ಕಾಲದ ಏಕ ಸದಸ್ಯ ನ್ಯಾಯ ಪೀಠದಲ್ಲಿದ್ದ ಅವರು ಅತ್ಯಾಚಾರ ಆರೋಪದಡಿ ಬಂಧಿತನಾಗಿರುವ ತೆಲಂಗಾಣದ 23 ವರ್ಷದ ಯುವಕ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ರೀತಿ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೇ, ಆರೋಪಿತ ಯುವಕನಿಗೆ ಜಾಮೀನು ನಿರಾಕರಿಸಿದ್ದಾರೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಅಪರಾಧ ಎಸಗುವುದು ಸಲೀಸಾಗಿಬಿಟ್ಟಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ ಇರುವ ಕಾರಣ ನಮ್ಮ ಕಾನೂನುಗಳು ಹಲ್ಲು ಕಳೆದುಕೊಂಡಿವೆ. 

ಬಹುಶಃ ಮಧ್ಯಪ್ರಾಚ್ಯ ದೇಶಗಳಲ್ಲಿ ನೀಡಲಾಗುವ ಕಠಿಣ ಶಿಕ್ಷೆಯನ್ನು ನಮ್ಮಲ್ಲಿಯೂ ತಪ್ಪಿತಸ್ಥರಿಗೆ ನೀಡುವಂತಾದರೆ ನಮ್ಮ ಜನ ತಕ್ಕ ರೀತಿಯಲ್ಲಿ ಕಾನೂನು ಪಾಲಿಸುತ್ತಾರೆ ಎಂದು ಹೇಳಿದ್ದಾರೆ.

ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು. ಅರ್ಜಿದಾರ ನಾಲ್ಕೈದು ದಿನ ಜೈಲಿನಲ್ಲಿರಲಿ ಬಿಡಿ. ಜೈಲಿನ ಅನುಭವವಾಗಲಿ ಎಂದು ನ್ಯಾಯಮೂರ್ತಿಗಳು ಹೇಳಿದ್ದು, ವಿಚಾರಣೆಯನ್ನು ಜೂನ್ 8ಕ್ಕೆ ಮುಂದೂಡಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ