ಗದಗ: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ನಡೆದಿದೆ.
ಶಿಗ್ಲಿ ಗ್ರಾಮದ ನಿವಾಸಿಯಾದ 28 ವರ್ಷದ ರೇಣುಕಾ ಎಂಬುವವರೇ ಮೃತಪಟ್ಟ ದುರ್ದೈವಿ. ಇವರು ಇಬ್ಬರು ಮಕ್ಕಳನ್ನು ಹೊಂದಿದ್ದು, ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಲಕ್ಷ್ಮೇಶ್ವರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.ಶಸ್ತ್ರಚಿಕಿತ್ಸೆ ನಡೆದ ನಂತರ ರೇಣುಕಾ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿತ್ತು.
ಪತಿಯ ಗಂಭೀರ ಆರೋಪ:
ವೈದ್ಯರು ಶಸ್ತ್ರಚಿಕಿತ್ಸೆ ಮಾಡುವ ಭರದಲ್ಲಿ ಅಜಾಗರೂಕತೆಯಿಂದ ರೇಣುಕಾ ಅವರ ಕರುಳನ್ನು ಕಟ್ ಮಾಡಿದ್ದಾರೆ ಎಂದು ಅವರ ಪತಿ ಮಂಜುನಾಥ್ ಗಂಭೀರವಾಗಿ ಆರೋಪಿಸಿದ್ದಾರೆ. ಕರುಳು ಕಟ್ ಆಗಿದ್ದರಿಂದ ತೀವ್ರ ರಕ್ತಸ್ರಾವ ಮತ್ತು ಸೋಂಕು ಉಂಟಾಗಿ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.

