Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈಶ್ವರ್ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಹಿಳೆಯರ ವಿಶೇಷ ಪೂಜೆ, ಮನವಿ

Advertisement

ಭಾಲ್ಕಿ  : ತಾಲೂಕಿನ ಹಲ್ಬರ್ಗಾ ಗ್ರಾಮದ ಭಜನಾ ಮಂಡಳಿಯ ಅಧ್ಯಕ್ಷೆ ಸರಸ್ವತಿ ಪ್ರಭಾ ಅವರ ನೇತೃತ್ವದಲ್ಲಿ ಮಹಿಳಾ ಶಕ್ತಿ ಸಂಘದ ತಾಯಂದಿರು ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ Eshwar Khandre ಅವರಿಗೆ ನೂತನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, ರಾಜ್ಯ ರಾಜಕಾರಣದಲ್ಲಿ ಈಶ್ವರ್ ಖಂಡ್ರೆ ಅವರು ಸಲ್ಲಿಸಿರುವ ಸೇವೆ, ಪಕ್ಷ ಸಂಘಟನೆಗೆ ನೀಡಿರುವ ಕೊಡುಗೆ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಅಭಿಪ್ರಾಯಪಟ್ಟರು. ರಾಜ್ಯದ ಅಭಿವೃದ್ಧಿ ಹಾಗೂ ಹೈದರಾಬಾದ್-ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈಶ್ವರ್ ಖಂಡ್ರೆ ಅವರಿಗೆ ಉನ್ನತ ಸ್ಥಾನಮಾನ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲಲಿತಾ ಪ್ರಭಾ, ಸಂಪಾವತಿ ಬಿರಾದಾರ, ಕಸ್ತೂರಬಾಯಿ ಬಿರಾದಾರ, ಬೇಬಾವತಿ ಕುಂಬಾರ, ಶಕುಂತಲಾ ಗುಮತ್ತಾ ಸೇರಿದಂತೆ ಅನೇಕ ಮಹಿಳೆಯರು ಉಪಸ್ಥಿತರಿದ್ದು, ನೂತನ ಸರ್ಕಾರ ರಚನೆ ಮಾಡುತ್ತಿರುವ ನಿಯೋಜಿತ ಮುಖ್ಯಮಂತ್ರಿ D. K. Shivakumar ಅವರು ಈಶ್ವರ್ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಜಿಲ್ಲೆ ಹಾಗೂ ಪ್ರದೇಶದ ಜನರ ಆಶಯವನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ವರದಿ : ಸಂತೋಷ ಬಿಜಿ ಪಾಟೀಲ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸಂಜೆ ಡಿ. ಕೆ ಶಿವಕುಮಾರ್ ಪ್ರಮಾಣವಚನ : ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆಬೆಳಗಾವಿ ‘ಬಿಸಿ ತುಪ್ಪ’: ಡಿಕೆಶಿ ಸಂಪುಟ ಸರ್ಕಸ್‌ಗೆ ಗಡಿ ಜಿಲ್ಲೆಯದ್ದೇ ಟೆನ್ಷನ್!ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ : ಮತ್ತಷ್ಟು ಸರಳೀಕರಣಗೊಳಿಸಿದ ರಾಜ್ಯ ಸರ್ಕಾರನಿವೃತ್ತ ಪಿಡಿಓ ಗೌಸ್ ಪೀರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆನಾಳೆ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪದಗ್ರಹಣ : ಮೂರು ರೀತಿಯ ಪಾಸ್ ವಿತರಣೆ ಕುರಿ ಕಾಯುವ ಕೆಲಸಕ್ಕೆ 700ಕ್ಕೆ ಅರ್ಜಿ ಸಲ್ಲಿಸಿದ್ದ ಪದವಿದರು ಈಶ್ವರ್ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಹಿಳೆಯರ ವಿಶೇಷ ಪೂಜೆ, ಮನವಿಖಾನಾಪುರದಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಕೆ : 13 ಆರೋಪಿಗಳು ಅರೆಸ್ಟ್ BIG NEWS : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ರಾಜೀನಾಮೆ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್ ಟೌನ್ ಹಾಗೂ ಮಹಾರಾಷ್ಟ್ರ ಮಂಡಲ ವತಿಯಿಂದ ಟೇಬಲ್ ಟೆನಿಸ್