
ಬೇರೆಯವರಿಗೆ ನೆರಳನ್ನು ಮಾಡಿಕೊಡುವ ಅಂದರೆ ಕಟ್ಟಡ ನಿರ್ಮಾಣದಲ್ಲಿ ತೊಡಗಿಕೊಂಡಿರುವ ನಿಜವಾದ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಸಿಗುವ ಸೌಲಭ್ಯಗಳು ತ್ವರಿತವಾಗಿ ಸಿಗುವ ನಿಟ್ಟಿನಲ್ಲಿ ಕಾರ್ಮಿಕ `ಇಲಾಖೆಯವರು ಕ್ರಮವಹಿಸಬೇಕೆಂದು ಕಾರ್ಮಿಕ ಮುಖಂಡ ಜಿ.ಎಮ್.ಜೈನೆಖಾನ್ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಶಾಸಕರಿಗೆ ಕಾರ್ಮಿಕ ಇಲಾಖೆಯ ಅಧಿಕಾರಿ ಹಾಗೂ ಕಾರ್ಮಿಕ ಮುಖಂಡರು ಕೂಡಿ ಸನ್ಮಾನ ಮಾಡಲಾಯಿತು
ಈ ಕಾರ್ಯಕ್ರಮದಲ್ಲಿ ತಹಶೀಲ್ದಾರರಾದ ಪ್ರಕಾಶ ಹೊಳೆಪ್ಪನವರ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪೂರ, ಕಾರ್ಮಿಕ ಇಲಾಖೆ ಅಧಿಕಾರಿಯಾದ ನಾಗರಾಜ ಮಧು, ಹಾಗೂ ಕಾರ್ಮಿಕ ಮುಖಂಡರಾದ ಪ್ರಶಾಂತ ಕಲಾದಗಿ, ಗಣೇಶ ದೊಡಮನಿ, ಮತ್ತು ರಮೇಶ ಬಂಡಿವಡ್ಡರ, ಇನ್ನು ಹಲವಾರು ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವರದಿ: ಮಂಜುನಾಥ ಕಲಾದಗಿ

