Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕು ಕಾನೂನು ಸೇವಾ ಸಮಿತಿಯಿಂದ ವಿಶ್ವ ಭೂಮಿ ದಿನಾಚರಣೆ

Advertisement
ಸಿರುಗುಪ್ಪ : -ನಗರದ ಜೆ.ಎಮ್.ಎಫ್.ಸಿ ನ್ಯಾಯಾಲಯದ ಆವರಣದೊಳಗಿರುವ ತಾಲೂಕು ವಕೀಲರ ಸಂಘದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ನಡೆದ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಹಾಜಿ ಹುಸೇನ್‌ಸಾಬ್ ಯಾದವಾಡ ಅವರು ಸಸಿಗೆ ನೀರೆರೆದು ಉದ್ಘಾಟಿಸಿದರು.



ಪ್ಯಾನಲ್ ವಕೀಲ ಎನ್.ಅಬ್ದುಲ್‌ಸಾಬ್ ಅವರು ಮಾತನಾಡಿ ಭೂಮಿಯೆಂದರೆ ಕೇವಲ ಮಣ್ಣು ಮಾತ್ರವಲ್ಲದೇ ನದಿ, ಪರ್ವತ, ಸಮುದ್ರ, ಅರಣ್ಯ, ಅನಿಲ ಹಾಗೂ ಖನಿಜ ಸಂಪತ್ತಿನಿಂದ ಕೂಡಿದೆ. ತನ್ನ ಸ್ವಾರ್ಥಕ್ಕಾಗಿ ಮಾನವನು ಸ್ವಯಂಕೃತ ಅಪರಾಧಕ್ಕೆ ಮುಂದಾಗಿದ್ದು, ಮಿತಿಮೀರಿ ಪರಿಸರ ಮಾಲಿನ್ಯದಿಂದಾಗಿ ಇಂದು ನೀರಿಗಾಗಿ ಪರದಾಡುವಂತಾಗಿದೆ.

ದಿನೇ ದಿನೇ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಕೃಷಿಭೂಮಿಯೂ ಮಾಯವಾಗುತ್ತಿದೆ. ಮುದೊಂದು ದಿನ ಬರೀ ನೀರು ಮಾತ್ರವಲ್ಲ ಆಹಾರಕ್ಕಾಗಿಯೂ ಪರದಾಡುವಂತಹ ಕಾಲ ಸನ್ನಿಹವಾಗಲಿದೆ.

ಆದ್ದರಿಂದ ನಾವೆಲ್ಲಾ ನೈಸರ್ಗಿಕ ಮಾಲಿನ್ಯವನ್ನು ತಡೆಯುವುದರೊಂದಿಗೆ ಭೂಮಿ ಮೇಲಿನ, ನೆಲ, ಜಲ, ವಾಯುಮಾಲಿನ್ಯವನ್ನು ತಡೆಯಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆಂದರು.

ವಕೀಲರಾದ ವೆಂಕೋಬ ಅವರು ಮಾತನಾಡಿ ಇಡೀ ಜೀವ ಸಂಕುಲದ ಒಳಿತಿಗಾಗಿ ಭೂಮಿಯ ಪರಿಶುದ್ದತೆಯನ್ನು ಹೆಚ್ಚಿಸಬೇಕೆಂದರೆ ನಾವೆಲ್ಲಾ ಮರಗಿಡಗಳನ್ನು ನೆಡಬೇಕು. ಪ್ರಕೃತಿ ನಮಗೆ ದೇವರು ಕೊಟ್ಟ ವರದಾನವಾಗಿದೆಂದರು.

ಇದೇ ವೇಳೆ ಸರ್ಕಾರಿ ಸಹಾಯಕ ಅಭಿಯೋಜಕಿ ಶಾರದ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಮಂಜುನಾಥಗೌಡ, ಕಾರ್ಯದರ್ಶಿ ಹೆಚ್.ಪ್ಯಾಟೆಗೌಡ, ಪ್ಯಾನಲ್ ವಕೀಲರಾದ ಮಲ್ಲಿಗೌಡ, ವೆಂಕಟೇಶ್ ನಾಯ್ಕ್, ಕೆ.ಸಣ್ಣ ಹುಸೇನ್, ಹಿರಿಯ ವಕೀಲರಾದ ಪತ್ತಾರ್ ವೀರಣ್ಣ, ಎಸ್.ಶ್ರೀನಿವಾಸ, ಸಿದ್ದಲಿಂಗಯ್ಯ ಹಾಗೂ ಸಾರ್ವಜನಿಕರು ಇದ್ದರು.

ವರದಿ.ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ