Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಪೌಷ್ಟಿಕ ಆಹಾರ ದಿನಾಚರಣೆ, ಮಾತೃ ವಂದನಾ ಸಪ್ತಾಹ ಕಾರ್ಯಕ್ರಮ.

Advertisement
ಸಿರುಗುಪ್ಪ : -ನಗರದ 9ನೇ ವಾರ್ಡಿನ 1ನೇ ಅಂಗನವಾಡಿ ಕೇಂದ್ರದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸಹಯೋಗದಲ್ಲಿ ನಡೆದ ವಿಶ್ವ ಪೌಷ್ಟಿಕ ಆಹಾರ ದಿನಾಚರಣೆ ಕಾರ್ಯಕ್ರಮವನ್ನು ವಕೀಲರ ಸಂಘದ ತಾಲೂಕಾಧ್ಯಕ್ಷ ಉಪ್ಪಾರ ವೆಂಕೋಬ ಅವರು ಉದ್ಘಾಟಿಸಿ ಮಾತನಾಡಿದರು.ಸಿರಿದಾನ್ಯಗಳ ಮಹತ್ವವನ್ನು ಸ್ಥಳೀಯ ಮಟ್ಟದಲ್ಲಿ ಜಾಗೃತಿ ಮೂಡಿಸಿ ಪೌಷ್ಟಿಕತೆಯನ್ನು ಹೆಚ್ಚಿಸಬೇಕಿದೆ. ಉತ್ತಮ ಪೋಷಕಾಂಶಗಳನ್ನು ಹೊಂದಿರುವ ತರಕಾರಿ, ಹಣ್ಣು, ಕಾಳುಗಳನ್ನು ಸೇವಿಸಬೇಕೆಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತವಿಕ ಮಾತನಾಡಿದ ಸಿ.ಡಿ.ಪಿ.ಓ ಪ್ರದೀಪ್ ಕುಮಾರ್ ಅವರು ರಾಷ್ಟ್ರೀಯ ಪೋಷಣ ಯೋಜನೆಯಡಿ ಪೋಷಣ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಮಾತೃವಂದನಾ ಸಪ್ತಾಹದ ವಿಶೇಷತೆ ಹಾಗೂ ಪೌಷ್ಟಿಕ ಆಹಾರದ ಮಹತ್ವವನ್ನು ವಿವರಿಸಿದರು.



ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಹಿರಿಯ ವಕೀಲ ಎನ್.ಅಬ್ದುಲ್‌ಸಾಬ್ ಅವರು ಪೂರ್ವಜರ ಕಾಲದಲ್ಲಿನ ಹೈನುಗಾರಿಕೆಯ ಮಹತ್ವ, ದಿನನಿತ್ಯದ ಕಾರ್ಯಗಳಲ್ಲೇ ಪಡೆಯುತ್ತಿದ್ದ ದೇಹದ ವ್ಯಾಯಾಮ, ಪ್ರಕೃತಿಯಿಂದ ಉಚಿತವಾಗಿ ದೊರೆಯುವ ವಿಟಮಿನ್‌ಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಮಾತೃವಂದನಾ ಕಾರ್ಯಕ್ರಮ, ಆರು ತಿಂಗಳ ಪುಟ್ಟ ಕಂದಮ್ಮಗಳಿಗೆ ಅನ್ನಪ್ರಾಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾಗೂ ಪೌಷ್ಟಿಕತೆಯುಳ್ಳ, ಎಳ್ಳು, ಸಜ್ಜೆ, ಗೋದಿ, ರಾಗಿ, ಇನ್ನಿತರ ದಾನ್ಯಗಳಿಂದ ತಯಾರಿಸಿದ ತಿನಿಸುಗಳನ್ನು ಪ್ರದರ್ಶಿಸಲಾಯಿತು.

ಇದೇ ವೇಳೆ ವಕೀಲರ ಸಂಘದ ಕಾರ್ಯದರ್ಶಿ ಶಿವಕುಮಾರ.ಎಮ್, ಹಿರಿಯ ವಕೀಲರಾದ ಟಿ.ವೆಂಕಟೇಶ ನಾಯ್ಕ್, ನೆಲಗುಂಟಯ್ಯಸ್ವಾಮಿ, ಮಲ್ಲಿಗೌಡ, ಅಂಗನವಾಡಿ ಮೇಲ್ವಿಚಾರಕಿಯರಾದ ಮಹಾದೇವಿ, ಗಂಗಮ್ಮ ಬಸರಗಿ, ಮೈನಾವತಿ, ಮುನ್ನೀಕರಣ, ನಾಗರತ್ನ, ರೇಖಾರಾಣಿ ಇನ್ನಿತರ ಇಲಾಖೆಗಳ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮಹಿಳೆಯರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ