Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನೂನು ಸೇವಾ ಸಮಿತಿಯಿಂದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ

Advertisement
ಸಿರುಗುಪ್ಪ : ನಗರದ ವಿಜಯಮೇರಿ ಶಾಲಾ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಜೆ.ಎಮ್.ಎಫ್.ಸಿ ಪ್ರಭಾರಿ ನ್ಯಾಯಾಧೀಶರಾದ ಈರಪ್ಪ ಢವಳೇಶ್ವರ್ ಅವರು ಉದ್ಘಾಟಿಸಿದರು.



ನಂತರ ಮಾತನಾಡಿ ಕಾನೂನು ಎಲ್ಲರಿಗೂ ಒಂದೇ ತೆರನಾಗಿ ಅನ್ವಯವಾಗುತ್ತದೆ. ಮನುಷ್ಯನ ಹುಟ್ಟಿನಿಂದ ಸಾವಿನವರೆಗೆ ಕಾನೂನು ಚೌಕಟ್ಟಿನಲ್ಲಿ ಜೀವಿಸಬೇಕಾಗಿದ್ದು, ಜನನ ಪ್ರಮಾಣ ಪತ್ರ ಉದ್ಯೋಗ ಮತ್ತು ಇನ್ನಿತರ ಗುರುತಿಗಾಗಿ ಅವಶ್ಯಕವಾಗಿದ್ದು, ಸಂಬಂದಿಸಿದ ಇಲಾಖೆಯಲ್ಲಿ ಪಡೆದಿರಬೇಕು.

ಒಂದು ವೇಳೆ ಸಿಗದಿದ್ದಾಗ ನಮ್ಮ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೋಬ ಅವರು ಮಾತನಾಡಿ ವಿದ್ಯಾರ್ಥಿಗಳಾದ ನೀವು ಇಂದಿನಿಂದಲೇ ಹೆಚ್ಚಿನ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ನೀಡಬಹುದಾಗಿದೆಂದರು.

ಸಹಾಯಕ ಸರ್ಕಾರಿ ಅಭಿಯೋಜಕರಾದ ಶಿವರಾಜ್ ಅವರು ಮಾತನಾಡಿ ಸಮಾಜದಲ್ಲಿ ಜಾತಿಯತೆಯನ್ನು ಮೀರಿ ನೆರವಿನ ಹಸ್ತವನ್ನು ಚಾಚಿರುವ ಸುದಾಮೂರ್ತಿ ಅವರಂತೆ ನಾವು ಸಹ ತೊಂದರೆ ಇರುವವರೆಗೆ ಸಹಾಯ ಮಾಡಬೇಕೆಂದು ತಿಳಿಸಿದರು.

ಹಿರಿಯ ವಕೀಲರಾದ ಎನ್.ಅಬ್ದುಲ್‌ಸಾಬ್ ಅವರು ಮಾತನಾಡಿ ಭವ್ಯ ಭಾರತ ಮುಂದಿನ ಪ್ರಜೆಗಳಾಗುವ ನೀವೆಲ್ಲಾ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ದೇಶದ ಕಾನೂನುಗಳನ್ನು ಗೌರವಿಸುತ್ತಾ ನಿಮ್ಮ ಭವಿಷ್ಯದ ಬಗ್ಗೆ ಒಳ್ಳೆಯ ಕನಸುಗಳನ್ನು ಕಾಣಬೇಕೆಂದು ತಿಳಿಸಿದರು.

ಇದೇ ವೇಳೆ ವಕೀಲರ ಸಂಘದ ಉಪಾಧ್ಯಕ್ಷ ಎಮ್.ಷರೀಪ್‌ಸಾಬ್, ಶಿಕ್ಷಣ ಸಂಯೋಜಕರಾದ ಸುರೇಶ್, ಶಾಲಾ ಮುಖ್ಯೋಪಾದ್ಯಾಯಿನಿ ಲೋರ್ಥ್ ಮೇರಿ, ಆರೋಗ್ಯ ಮೇರಿ, ಪ್ಯಾನಲ್ ವಕೀಲರಾದ ಟಿ.ವೆಂಕಟೇಶ್ ನಾಯ್ಕ್, ಮಲ್ಲಿಗೌಡ, ನೆಲಗುಂಟಯ್ಯ, ಹೆಚ್.ಹುಲುಗಪ್ಪ, ರುದ್ರಮುನಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ