Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ           

Advertisement

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ‘ಆರೋಗ್ಯಕರ ವಯಸ್ಸಿಗೆ ಯೋಗ’ ಎಂಬ ಥೀಮ್ ಅಡಿಯಲ್ಲಿ 12ನೆಯ ವಿಶ್ವ ಯೋಗ ದಿನ ಆಚರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ, ಇತಿಹಾಸ ತಿಳಿಸಿಕೊಡುವುದರ ಜೊತೆಗೆ ವಜ್ರಾಸನ, ವಕ್ರಾಸನ, ಪದ್ಮಾಸನ, ಪಾದಹಸ್ತಾಸನ, ತ್ರಿಕೋನಾಸನ, ಭುಜಂಗಾಸನ, ಮಕರಾಸನ, ಅರ್ಧ ಹಾಲಾಸನ ಮುಂತಾದ ವಿವಿಧ ಯೋಗಾಸನಗಳನ್ನು ಮತ್ತು ಪ್ರಾಣಾಯಾಮವನ್ನು ಮಾಡಿಸಿದರು. ಯೋಗಮಂತ್ರ, ಓಂಕಾರ ಹೇಳಿಕೊಡಲಾಯಿತು. ವಿದ್ಯಾರ್ಥಿಗಳಾದ ಭೂಮಿಕಾ ಗರಗದ, ಶ್ರಾವಣಿ ಹೊಂಗಲ, ಶ್ರೇಯಾ ಶೀಗಿಹಳ್ಳಿಮಠ ಯೋಗದ ಉಪಯೋಗದ ಕುರಿತು ಭಾಷಣ ಮಾಡಿದರು.
news_1782108392_0_137.webp

 

ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಮಾತನಾಡಿ ಯೋಗ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಾಗುವುದಲ್ಲದೇ ದೈಹಿಕ, ಮಾನಸಿಕ ಆರೋಗ್ಯ ಉತ್ತಮವಾಗುತ್ತದೆ ಎಂದರು. ವಿಶ್ವಕ್ಕೆ ಯೋಗದ ಪರಿಚಯ ಮಾಡಿಕೊಟ್ಟ ಭಾರತದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು ಎಂದು ಅವರು ಅಭಿಪ್ರಾಯಪಟ್ಟರು. ಪ್ರತಿದಿನ ಒಂದಿಷ್ಟು ಸಮಯ ಯೋಗಾಭ್ಯಾಸಕ್ಕೆ ಮೀಸಲಿಡುವುದರಿಂದ ಒತ್ತಡರಹಿತ ಬದುಕು ಸಾಗಿಸಬಹುದು ಎಂದು ಅವರು ಹೇಳಿದರು. 

ಕಾರ್ಯಕಕ್ರಮದಲ್ಲಿ ಶಿಕ್ಷಕರಾದ ಜಗದೀಶ ನರಿ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ಗಾಯತ್ರಿ ತುರಾದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾ ಗರಗದ ನಿರೂಪಿಸಿದರು. ಚನ್ನಬಸಮ್ಮ ಸೊಗಲದ ಸ್ವಾಗತಿಸಿದರು. ಪಲ್ಲವಿ ಸೂರ್ಯವಂಶಿ ವಂದಿಸಿದರು.

ವರದಿ :ದುಂಡಪ್ಪ ಹೂಲಿ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಕ್ಕೇರಿ ತಾಲೂಕ ಘಟಕದ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆ ಇವರಿಂದ ತಹಶೀಲ್ದಾರ್ ಅವರಿಗೆ ಮನವಿ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ           ಓಂ ಶಾಂತಿ ಕೇಂದ್ರದಲ್ಲಿ ಯೋಗ ದಿನಾಚರಣೆ 572 ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ಸೌಹಾರ್ದತೆಯ ಸಂಕೇತವಾಗಿ ಅದ್ದೂರಿಯಾಗಿ ನೆರವೇರಿದ ಹಸೇನ್ ಹುಸೇನ್ ಪಂಜಾ ಮಸೀದಿ ಉದ್ಘಾಟನೆಭಾಷಾ ದ್ರೋಹಿಗಳಿಗೆ ಅಥಣಿಯಲ್ಲಿ ಕರವೇ ಸಿಂಹಗರ್ಜನೆ: ಎಂಇಎಸ್ ಕರಾಳ ಮೋರ್ಚಾಗೆ ಅನುಮತಿ ನಿರಾಕರಿಸಲು ಆಗ್ರಹರಾಜ್ಯದಲ್ಲಿ ಬಸ್ ಪ್ರಯಾಣ ದರ ಶೇ. 25 ರಷ್ಟು ಏರಿಕೆ ಸಾಧ್ಯತೆ ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಯೋಗ ಸಹಕಾರಿ: ಶಾಸಕ ಲಕ್ಷ್ಮಣ ಸವದಿ ಜು. 3 ದಲಿತ ಜನಾಗ್ರಹ ಸಮಾವೇಶಕ್ಕೆ ಡಿಎಸ್ಎಸ್  ಕರೆದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ