LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದಾವಣಗೆರೆ : ಅಂದಾಜು 30 ಕೋಟಿ ರೂಪಾಯಿ ಕಾಮಗಾರಿಗೆ ಪೂಜೆ ಹಾಗೂ ಚಾಲನೆ

Advertisement
ದಾವಣಗೆರೆ: ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ್  ಜಾರಕಿಹೊಳಿ ಅವರು ಇಂದು ದಾವಣಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 30 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸಿದರು.

ಲೋಕಿಕೆರೆ ಗ್ರಾಮದಿಂದ ದಾವಣಗೆರೆವರೆಗೆ ಸಿಸಿ ರಸ್ತೆ ಕಾಮಗಾರಿಗೆ ₹6 ಕೋಟಿ ವೆಚ್ಚದ ಗುದ್ದಲಿ ಪೂಜೆ ಮಾಡಿದರು.

ಬಾವಿಹಾಳು ಗ್ರಾಮದಿಂದ ಗಂಗನಕಟ್ಟೆ, ಕೊಡಗನೂರುವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ₹12 ಕೋಟಿ ವೆಚ್ಚದ ಗುದ್ದಲಿ ಪೂಜೆ ನೆರವೇರಿಸಿದರು. ಲೋಕಿಕೆರೆ, ಶ್ಯಾಗಲೇ, ಹೂವಿನಮಡು ರಸ್ತೆ ಕಾಮಗಾರಿಗೆ ₹8 ಕೋಟಿ ವೆಚ್ಚದ ಗುದ್ದಲಿ ಪೂಜೆ ಮಾಡಿದರು.

ನರಗನಹಳ್ಳಿ, ಮಾಯಕೊಂಡ, ಗುಮ್ಮನೂರು, ಕೊಡಗನೂರು, ಬಾಡ ಸೇರಿದಂತೆ ಇತರ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೂ ಗುದ್ದಲಿ ಪೂಜೆ ನೆರವೇರಿಸಿದರು. ಇದಕ್ಕೂ ಮುನ್ನ ಅಣಜಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನವನ್ನು ಉದ್ಘಾಟಿಸಿ, ಕಾಟೀಹಳ್ಳಿ ಗ್ರಾಮದಲ್ಲಿ ನೂತನ ಸಮುದಾಯ ಭವನದ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ  ಕೆ.ಎಸ್. ‌ಬಸವಂತಪ್ಪ ಅವರು ಹಾಗೂ ಸ್ಥಳೀಯ ‌ಮುಖಂಡರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ