
ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಪಕ್ಷ ಸಂಘಟನೆಯ ಬಲವರ್ಧನೆಗೆ ಪ್ರತಿಯೊಬ್ಬರೂ ಶ್ರಮಿಸಿ, ಬೂತ್ ಮಟ್ಟದಿಂದಲೇ ಸಂಘಟಿತ ಕಾರ್ಯಚಟುವಟಿಕೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲು ಕರೆ ನೀಡಿದರು.
ಪಾಶ್ಚಾಪೂರ ಗ್ರಾಮದಲ್ಲಿ ಇಂದು ಯುವ ನಾಯಕರಾದ ರಾಹುಲ ಜಾರಕಿಹೊಳಿ ಅವರು ಫಿಟ್ನೆಸ್ ಜಿಮ್ ಸೆಂಟರ್ ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ

