Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಡೂರ ವೀರಭದ್ರೇಶ್ವರ ಗರ್ಭಗುಡಿ ಸಂಪೂರ್ಣ ಜಲಾವೃತ

Advertisement
ಚಿಕ್ಕೋಡಿ:-ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪರಿಣಾಮವಾಗಿ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿ ಸಂಪೂರ್ಣವಾಗಿ ಜಲಾವೃತಗೊಂಡಿದೆ.



ಹೌದು ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿ ನೀರು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದಾಗಿ ನದಿ ತೀರದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರಿನ ಪೌರಾಣಿಕ ಹಿನ್ನೆಲೆಯುಳ್ಳಂತಹ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿ ಒಳಗೆ ಕೃಷ್ಣಾ ನದಿ ನೀರು ಪ್ರವೇಶಿಸಿದೆ.ಇದರಿಂದ ವೀರಭದ್ರೇಶ್ವರ ದರ್ಶನವು ಸಂಪೂರ್ಣವಾಗಿ ಬಂದಾಗಿದೆ. ಇದು ಭಕ್ತರಿಗೆ ನಿರಾಶೆ ಉಂಟುಮಾಡಿದೆ.



ನಿನ್ನೆ ರಾತ್ರಿ 10.30 ಕ್ಕೆ ದೇವಸ್ಥಾನದ ದಕ್ಷಿಣದ ಬಾಗಿಲಿನಿಂದ ಕೃಷ್ಣಾ ನದಿ ನೀರು ಪ್ರವೇಶಿಸಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿಗೆ ನೀರು ಪ್ರವೇಶಿಸಿದೆ. ಇದರಿಂದ ಶ್ರೀ ವೀರಭದ್ರೇಶ್ವರ ದೇವರಿಗೆ ಕೃಷ್ಣಾ ನದಿಯ ನೀರು ಜಲಾಭಿಷೇಕವಾಗಿದೆ.

ಗರ್ಭಗುಡುಗೆ ನೀರು ಪ್ರವೇಶಿಸುತ್ತಿದ್ದಂತೆ ಅರ್ಚಕರು ಪೂಜೆ, ಆರತಿಯನ್ನು ನೆರವೇರಿಸಿ ಸಕಲವಾದ್ಯಮದೊಂದಿಗೆ ಅತ್ಯಂತ ಭಕ್ತಿ ಭಾವದಿಂದ ಶ್ರೀವೀರಭದ್ರೇಶ್ವರ ಹಾಗೂ ಶ್ರೀ ಭದ್ರಕಾಳೇಶ್ವರಿ ದೇವರುಗಳನ್ನು ಶ್ರೀಕಾಡಸಿದ್ದೇಶ್ವರ ಮಠಕ್ಕೆ ತರಲಾಯಿತು.



ಒಟ್ಟಿನಲ್ಲಿ ಕರ್ನಾಟಕ, ಮಹಾರಾಷ್ಟ್ರದ ಹಾಗೂ ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳ ಭಕ್ತರ ಆರಾಧ್ಯ ದೈವ ಆಗಿರುವಂತಹ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿಗೆ ನೀರು ಪ್ರವೇಶಿಸಿ ದರ್ಶನವನ್ನು ಸಂಪೂರ್ಣವಾಗಿ ಬಂದಾಗಿದೆ. ಇದರಿಂದ ಭಕ್ತರಿಗೆ ಸಹಜವಾಗಿ ನಿರಾಶೆ ಉಂಟಾಗಿದೆ.

ವರದಿ:- ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ