LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದೈಹಿಕ, ಮಾನಸಿಕ, ಬೌದ್ದಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಸಹಕಾರಿ : ಬಿಇಒ ಸೋಮಶೇಖರ್

Advertisement
ತುರುವೇಕೆರೆ: ತಾಲ್ಲೂಕಿನ ನೆಹರು ವಿದ್ಯಾಶಾಲಾ ಬಾಲಿಕಾ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಚಾಲನೆ ನೀಡಿದರು.

ನಂತರ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್, ಪ್ರಸ್ತುತ ಒತ್ತಡದ ಬದುಕಿನಲ್ಲಿ ಪ್ರತಿಯೊಬ್ಬರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಸಹಕಾರಿಯಾಗಿದೆ ಎಂದರು.

ಸುಮಾರು 5 ಸಾವಿರ ವರ್ಷಗಳ ಹಿಂದೆಯೇ ಭಾರತದಲ್ಲಿ ಯೋಗ ಪದ್ದತಿ ರೂಢಿಯಲ್ಲಿತ್ತು ಎನ್ನಲಾಗಿದೆ. ಯೋಗ ಇಂದು ಭಾರತದಲ್ಲಿ ಮಾತ್ರವಲ್ಲ ಪ್ರಪಂಚದ ಎಲ್ಲಾ ರಾಷ್ಟ್ರಗಳಲ್ಲಿ ಪ್ರಚಲಿತದಲ್ಲಿದೆ. ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ದೃಷ್ಟಿಯಿಂದ ಪ್ರತಿವರ್ಷ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನ ಎಂದು ಆಚರಿಸಲಾಗುತ್ತಿದೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಬಗ್ಗೆ ಪ್ರಸ್ತಾಪಿಸಿದ್ದಲ್ಲದೆ ಯೋಗದ ಪ್ರಾಚೀನ ಪರಂಪರೆ ಮತ್ತು ಜಾಗತಿಕ ಆರೋಗ್ಯ, ಸಾಮಾಜಿಕ ಶಾಂತಿ ಉತ್ತೇಜಿಸುವ ಸಾಮರ್ಥ್ಯ ಯೋಗದಲ್ಲಿದೆ ಎಂಬುದನ್ನು ಒತ್ತಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ 2014 ರ ಡಿಸೆಂಬರ್ 11 ರಂದು ವಿಶ್ವಸಂಸ್ಥೆಯು ಪ್ರತಿ ವರ್ಷದ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತು. ಈ ಘೋಷಣೆಗೆ ವಿಶ್ವದ 177 ರಾಷ್ಟ್ರಗಳು ಬೆಂಬಲಿಸಿವೆ ಎಂದರು.

ವಿದ್ಯಾರ್ಥಿಗಳು ಪ್ರತಿನಿತ್ಯ ಬೆಳಿಗ್ಗೆ ಯೋಗಾಭ್ಯಾಸ ಮಾಡುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ಅಧ್ಯಯನದಲ್ಲಿ ಏಕಾಗ್ರತೆ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರತಿಯೊಂದು ವಿಷಯದಲ್ಲಿ ಹೆಚ್ಚಿನ ಜ್ಞಾನ ಹೊಂದಲು ಏಕಾಗ್ರತೆ ಬಹಳ ಮುಖ್ಯವಾಗುತ್ತದೆ. ಆದ್ದರಿಂದ ಏಕಾಗ್ರತೆ, ಮಾನಸಿಕ ಹಾಗೂ ಬೌದ್ದಿಕ ಬೆಳವಣಿಗೆಗೆ ಯೋಗಾಭ್ಯಾಸ ಮಾಡುವುದು ಒಳ್ಳೆಯದು ಎಂದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಸಿ.ಬಿ.ಚಂದ್ರಯ್ಯ, ದೈಹಿಕ ಶಿಕ್ಷಕಿ ಗೀತಾ, ಶಿಕ್ಷಕರಾದ ಶ್ರೀಧರ್, ಚಂದ್ರಶೇಖರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ