Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನಾರೋಗ್ಯ ರಹಿತ ಜೀವನಕ್ಕೆ ಯೋಗ ಸಹಕಾರಿ : ಎಂ.ಬಿ.ಲೋಕೇಶ್

Advertisement
ತುರುವೇಕೆರೆ: ತಾಲ್ಲೂಕಿನ ಅಂಚಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಯೋಗ ದಿನಾಚರಣೆಯ ಬಗ್ಗೆ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಂ.ಬಿ.ಲೋಕೇಶ್, ಪ್ರಸ್ತುತ ಪ್ರತಿಯೊಬ್ಬ ವ್ಯಕ್ತಿಯೂ ಒತ್ತಡದ ಬದುಕನ್ನು ಸಾಗಿಸುತ್ತಿದ್ದಾರೆ. ಒತ್ತಡದ ಬದುಕಿನ ನಡುವೆ ದೈಹಿಕ ಆರೋಗ್ಯದ ಕಡೆಗೆ ಹೆಚ್ಚಿನ ಗಮನವನ್ನು ನೀಡುತ್ತಿಲ್ಲ. ಆದಕಾರಣ ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದಾರೆ. ಒತ್ತಡದ ಬದುಕನ್ನು ಹಗುರವಾಗಿಸಿ ದೈಹಿಕವಾಗಿ ಆರೋಗ್ಯವಂತರನ್ನಾಗಿ ಮಾಡಲು ಯೋಗ ಅತ್ಯುತ್ತಮ ಚಿಕಿತ್ಸಾ ಪದ್ಧತಿಯಾಗಿದೆ ಎಂದರು.



ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ ಹೆಚ್ಚಿಸಲು, ಬೌದ್ದಿಕ ಮಟ್ಟವನ್ನು ಸುಧಾರಿಸಲು ಯೋಗ ಬಹಳ ಪ್ರಯೋಜಕಾರಿಯಾಗಿದೆ. ಜ್ಞಾನಾರ್ಜನೆಗೆ ಏಕಾಗ್ರತೆ ಬಹಳ ಮುಖ್ಯವಾಗಿದ್ದು, ಯೋಗದಿಂದ ಅಧ್ಯಯನದಲ್ಲಿ ಏಕಾಗ್ರತೆ ಸಾಧಿಸಲು, ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ವಿವಿಧ ಕ್ರೀಡೆಗಳಲ್ಲಿ ತೊಡಗುವುದರಿಂದ ದೈಹಿಕವಾಗಿ ಸದೃಢರಾಗಬಹುದಾಗಿದೆ ಆದರೆ ಮಾನಸಿಕವಾಗಿ ಸದೃಢರಾಗಲು ಯೋಗ ಅತ್ಯವಶ್ಯಕವಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಲೆಯ ದೈಹಿಕ ಶಿಕ್ಷಕಿ ಸುಧಾಮಣಿ ಶಿಕ್ಷಕ ವರ್ಗಕ್ಕೆ, ವಿದ್ಯಾರ್ಥಿಗಳಿಗೆ ಯೋಗ ಹೇಳಿಕೊಟ್ಟರು. ಶಾಲೆಯ ಮುಖ್ಯ ಶಿಕ್ಷಕ ಕುಮಾರಪ್ಪ, ಶಿಕ್ಷಕರಾದ ಗೋಪಾಲನಾಯಕ್, ರೂಪಶ್ರೀ, ಸುಮಾ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ