LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅನಾರೋಗ್ಯ ರಹಿತ ಜೀವನಕ್ಕೆ ಯೋಗ ಸಹಕಾರಿ : ಎಂ.ಬಿ.ಲೋಕೇಶ್

Advertisement
ತುರುವೇಕೆರೆ: ತಾಲ್ಲೂಕಿನ ಅಂಚಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಯೋಗ ದಿನಾಚರಣೆಯ ಬಗ್ಗೆ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಂ.ಬಿ.ಲೋಕೇಶ್, ಪ್ರಸ್ತುತ ಪ್ರತಿಯೊಬ್ಬ ವ್ಯಕ್ತಿಯೂ ಒತ್ತಡದ ಬದುಕನ್ನು ಸಾಗಿಸುತ್ತಿದ್ದಾರೆ. ಒತ್ತಡದ ಬದುಕಿನ ನಡುವೆ ದೈಹಿಕ ಆರೋಗ್ಯದ ಕಡೆಗೆ ಹೆಚ್ಚಿನ ಗಮನವನ್ನು ನೀಡುತ್ತಿಲ್ಲ. ಆದಕಾರಣ ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದಾರೆ. ಒತ್ತಡದ ಬದುಕನ್ನು ಹಗುರವಾಗಿಸಿ ದೈಹಿಕವಾಗಿ ಆರೋಗ್ಯವಂತರನ್ನಾಗಿ ಮಾಡಲು ಯೋಗ ಅತ್ಯುತ್ತಮ ಚಿಕಿತ್ಸಾ ಪದ್ಧತಿಯಾಗಿದೆ ಎಂದರು.



ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ ಹೆಚ್ಚಿಸಲು, ಬೌದ್ದಿಕ ಮಟ್ಟವನ್ನು ಸುಧಾರಿಸಲು ಯೋಗ ಬಹಳ ಪ್ರಯೋಜಕಾರಿಯಾಗಿದೆ. ಜ್ಞಾನಾರ್ಜನೆಗೆ ಏಕಾಗ್ರತೆ ಬಹಳ ಮುಖ್ಯವಾಗಿದ್ದು, ಯೋಗದಿಂದ ಅಧ್ಯಯನದಲ್ಲಿ ಏಕಾಗ್ರತೆ ಸಾಧಿಸಲು, ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ವಿವಿಧ ಕ್ರೀಡೆಗಳಲ್ಲಿ ತೊಡಗುವುದರಿಂದ ದೈಹಿಕವಾಗಿ ಸದೃಢರಾಗಬಹುದಾಗಿದೆ ಆದರೆ ಮಾನಸಿಕವಾಗಿ ಸದೃಢರಾಗಲು ಯೋಗ ಅತ್ಯವಶ್ಯಕವಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಲೆಯ ದೈಹಿಕ ಶಿಕ್ಷಕಿ ಸುಧಾಮಣಿ ಶಿಕ್ಷಕ ವರ್ಗಕ್ಕೆ, ವಿದ್ಯಾರ್ಥಿಗಳಿಗೆ ಯೋಗ ಹೇಳಿಕೊಟ್ಟರು. ಶಾಲೆಯ ಮುಖ್ಯ ಶಿಕ್ಷಕ ಕುಮಾರಪ್ಪ, ಶಿಕ್ಷಕರಾದ ಗೋಪಾಲನಾಯಕ್, ರೂಪಶ್ರೀ, ಸುಮಾ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ