Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ.

Advertisement
ಯಳಂದೂರು:-ತಾಲ್ಲೂಕಿನ ಯರಿಯೂರು ಉನ್ನತಿಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನವನ್ನು ವಿವಿಧ ಭಂಗಿಯ ಯೋಗ ಪ್ರದರ್ಶಿಸುವ ಮೂಲಕ ಆಚರಣೆ ಮಾಡಲಾಯಿತು.ವಿದ್ಯರ್ಥಿಗಳು ಹಾಗೂ ಶಿಕ್ಷಕರು ಸಮವಸ್ತ್ರ ಧರಿಸಿ ಶಿಸ್ತಿನಿಂದ ಯೋಗಮಾಡುವುದರ ಮೂಲಕ ಯೋಗ ದಿನಾಚರಣೆಯನ್ನು ನಡೆಸಿದರು.

ಈ ವೇಳೆ ದೈಹಿಕ ಶಿಕ್ಷಕರಾದ ಮಹದೇವ್ ರವರು ಮಾತನಾಡಿ ದೇಹ ಮತ್ತು ಮನಸ್ಸು ಎರಡನ್ನೂ ಸ್ವಸ್ಥವಾಗಿಡಲು ಯೋಗದಿಂದ ಸಾಧ್ಯವಿದೆ,ಯೋಗವೆಂದರೆ ಔಷಧ ರಹಿತ ಚಿಕಿತ್ಸಾ ಪದ್ಧತಿಯ ದೇಸಿ ಕ್ರಮ,ಮಿತ ಆಹಾರ ಸೇವನೆ, ಉಪವಾಸ ವ್ಯಾಯಾಮದಂತಹ ಚಿಕಿತ್ಸಾ ಕ್ರಮಗಳ ಮೂಲಕ ಮನುಷ್ಯನ ದೇಹವನ್ನು ನಿಯಂತ್ರಣ ತರಬಹುದಾಗಿದೆ. ಪ್ರತಿದಿನ ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಬಹುದು,ಜೊತೆಗೆ ಸರಳ ಯೋಗಗಳು ನಮ್ಮ ಮನಸ್ಸನ್ನು ಉಲ್ಲಸವಾಗಿಡುತ್ತದೆ ಎಂದರು.

ಶಿಕ್ಷಕ ಸುರೇಶ್ ಮಾತನಾಡಿ ಇಂದಿನ ಒತ್ತಡದ ಜೀವನದಲ್ಲಿ ಮನುಷ್ಯನ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಅಗತ್ಯವಾಗಿದೆ, ಯಾವುದೇ ವಯಸ್ಸಿನ ಮಿತಿಯಿಲ್ಲದೆ ಯೋಗವನ್ನು ಅಭ್ಯಾಸ ಮಾಡಿಕೊಳ್ಳಬೇಕು,ಜಗತ್ತಿಗೆ ಯೋಗವನ್ನು ಅನಾದಿ ಕಾಲದಿಂದಲೂ ಪರಿಚಯ ಮಾಡಿ ಕೊಟ್ಟಿರುವುದು ನಮ್ಮ ಭಾರತ ದೇಶದ ಋಷಿ ಮುನಿಗಳು, ಯೋಗದಿಂದ ಸದೃಢ ದೇಹ ಮತ್ತು ಸದೃಢ ಮನಸ್ಸು ನಿರ್ಮಾಣವಾಗುತ್ತದೆ. ಒಳ್ಳೆಯ ಜೀವನಶೈಲಿ, ಸಾತ್ವಿಕ ಆಹಾರ ಸೇವನೆ ಹಾಗೂ ಉತ್ತಮ ಚಿಂತನೆ ಮಾಡುತ್ತಾ ಕಾಯಕ ಯೋಗದ ಮೂಲಕ ಸಾರ್ಥಕವಾಗಿ ಬದುಕೋಣ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಶಿಕ್ಷಕರಾದ ಬಸವಣ್ಣ, ಉಮಾಯಸ್ಮ, ನಿರ್ಮಲ ರಾಣಿ, ಮಂಜುಳಾ, ಮಮತಾ ಹಾಗೂ ಆಶಾ ಕಾರ್ಯಕರ್ತರು ವಿದ್ಯಾರ್ಥಿಗಳು ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ