LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯವಶ್ಯಕ : ಸೋಮನಾಥ ಪಾಟೀಲ

Advertisement
ಬೀದರ : ಒತ್ತಡದ ಜೀವನದಲ್ಲಿ ಮನಷ್ಯನು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗವು ಅತ್ಯಂತ ಅವಶ್ಯಕವಾಗಿದ್ದು ಈ ನಿಟ್ಟಿಬಲ್ಲಿ ಯೋಗ ಪ್ರತಿಯೊಬ್ಬರ ಜೀವನದ ಭಾಗವಾಗಬೇಕಿದೆ ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾದ್ಯಕ್ಷ ಸೋಮನಾಥ ಪಾಟೀಲ ಹೇಳಿದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಕ್ಷ ಬೀದರ ನಗರ ಮಂಡಲ ವತಿಯಿಂದ ನಗರದ ವಿಜ್ಞಾನ ವರ್ಧಿನಿ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ವಿಶ್ವ ಯೋಗ ದಿನಾಚಾರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.



ವೇದ ಉಪನೀಷತ್ತಿನಲ್ಲು ಯೋಗದ ಉಲ್ಲೇಖವಿದೆ ಮತ್ತು ಶತಮಾನಗಳಿಂದ ನಮ್ಮ ಸಾಧು ಸಂತರು ಮತ್ತು ಆಧ್ಯಾತ್ಮಿಕ ಗುರುಗಳು ಯೋಗಾಭ್ಯಾಸ ಮಾಡುತ್ತಿದ್ದಾರೆ.

ಯೋಗಗುರು ಬಾಬಾ ರಾಮದೇವ, ಶ್ರೀ ಶ್ರೀ ರವಿಶಂಕರ ಗೂರುಜಿ ಸೇರಿದಂತೆ ಅನೇಕ ಸಂತರು ಯೋಗವನ್ನು ಜಗತ್ತಿಗೆ ಪರಿಚಯಿಸಿದ್ದು, ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಯೋಗಕ್ಕೆ ವಿಶ್ವ ಮಾನ್ಯತೆ ದೊರೆತಿದ್ದು ಜಗತ್ತಿನಾದ್ಯಂತ ಯೋಗ ದಿನವನ್ನು ಆಚರಿಸುತ್ತಿರುವುದು ಭಾರತೀಯರೆಲ್ಲರಿಗೆ ಹೆಮ್ಮೆಯ ವಿಷಯ ಎಂದು ಹೇಳಿದರು.



ಐ.ಎನ್.ಓ ಜಿಲ್ಲಾದ್ಯಕ್ಷ ಗೋರಖನಾಥ ಕುಂಬಾರ ಹಾಗೂ ಉಪಾದ್ಯಕ್ಷ ನಿಲಮ್ಮಾ ರೂಗನ್ ಯೋಗಾಭ್ಯಾಸ ಮಾಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಭಗವಂತ ಖೂಬಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪಾ ಔರಾದೆ, ನಗರ ಅಧ್ಯಕ್ಷ ಶಶಿಧರ ಹೋಸಳ್ಳಿ, ಯೋಗ ದಿನಾಚರಣೆ ಅಭಿಯಾನದ ಜಿಲ್ಲಾ ಸಂಯೋಜಕ ಗುರುನಾಥ ರಾಜಗೀರಾ, ಪ್ರಮುಖರಾದ ಬಾಬು ವಾಲಿ, ಜಯಕುಮಾರ ಕಾಂಗೆ, ರಾಜಶೇಖರ ನಾಗಮೂರ್ತಿ, ಗಣೇಶ ಭೋಸ್ಲೆ, ಸುನೀಲ ಗೌಳಿ ಸೇರಿದಂತೆ ಇತರರಿದ್ದರು.



ವರದಿ:ಸಂತೋಷ ಬಿಜಿ ಪಾಟೀಲ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ