Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಧಾರಾಣಿ 51 ರಲ್ಲೂ ಯಂಗ್ ಆ್ಯಂಡ್ ಬ್ಯೂಟಿಫುಲ್

Advertisement
ಟಿ ಸುಧಾರಾಣಿ  ಅವರು ಎಲ್ಲರ ಫೇವರಿಟ್ ನಟಿ. ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಆ ಬಳಿಕ 1986ರಲ್ಲಿ ನಾಯಕಿ ಆಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು ಗೊತ್ತೇ ಇದೆ. ಆ ಬಳಿಕ ಸುಧಾರಾಣಿ ಸಾಲು ಸಾಲು ಚಿತ್ರಗಳನ್ನು ಮಾಡಿದರು. ಅವರು ಮಾಡದೇ ಇರುವ ಪಾತ್ರಗಳಿಲ್ಲ. ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಈಗ ಅವರು ‘ಮಜಾ ಟಾಕೀಸ್​’ಗೆ ಆಗಮಿಸಿದ್ದಾರೆ. ಅವರ ಯೌವನದ ಬಗ್ಗೆ ಇಲ್ಲಿ ಮಾತನಾಡಲಾಗಿದೆ ಅನ್ನೋದು ವಿಶೇಷ.



ಸುಧಾರಾಣಿ ಅವರು ಜನಿಸಿದ್ದು 1973ರಲ್ಲಿ. ಅವರಿಗೆ ಈಗ 51 ವರ್ಷ. ಅವರು ಈಗಲೂ ಯಂಗ್ ಆ್ಯಂಡ್ ಬ್ಯೂಟಿಫುಲ್ ಆಗಿ ಕಾಣಿಸುತ್ತಾರೆ. ಅವರು ನಿತ್ಯ ವ್ಯಾಯಾಮ, ಯೋಗ ಮಾಡುತ್ತಾರೆ. ಇದು ಅವರ ಸೌಂದರ್ಯದ ಹಿಂದಿನ ಗುಟ್ಟು. ಅವರು ಶಿವರಾಜ್​ಕುಮಾರ್ ಸೇರಿದಂತೆ ಕನ್ನಡದ ಅನೇಕ ಹೀರೋಗಳ ಜೊತೆ ನಟಿಸಿದ್ದಾರೆ. ‘ಫೈರ್ ಫ್ಲೈ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ತಂಡ ಸಿನಿಮಾ ಪ್ರಚಾರಕ್ಕಾಗಿ ‘ಮಜಾ ಟಾಕೀಸ್’ ವೇದಿಕೆಗೆ ಬಂದಿದೆ.

ಮಜಾ ಟಾಕೀಸ್ ಸದಸ್ಯರು ಸುಧಾರಾಣಿ ಇನ್ನೂ ಯಂಗ್ ಆಗಿ ಕಾಣೋ ಬಗ್ಗೆ ಮಾತನಾಡಿದ್ದಾರೆ. ‘ಓರ್ವ ಮನುಷ್ಯ ಎಷ್ಟೇ ವರ್ಷ ಆದರೂ ಹೀಗೆ ಇರೋಕಾಗುತ್ತಾ? ನನ್ನ ಗಂಡ ರೊಮ್ಯಾಂಟಿಕ್ ಇರಲಿಲ್ಲ. ಆದರೆ, ಮನೆ ದೇವ್ರು ರಿಲೀಸ್ ಆಗಿ 100 ದಿನ ಕಳೆಯೋದರೊಳಗೆ ನನಗೆ ಮೂರು ತಿಂಗಳು’ ಎಂದು ಹಾಸ್ಯ ಚಟಾಕಿ ಹಾರಿಸಲಾಗಿದೆ.



ಸುಧಾರಾಣಿ ಅವರು ಈಗಲೂ ನಟನಾ ಲೋಕದ ಜೊತೆ ನಂಟು ಹೊಂದಿದ್ದಾರೆ. ಅವರು ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಾ ಇದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಗಮನ ಸೆಳೆಯುತ್ತಿದೆ. ಇನ್ನು, ಸುಧಾರಾಣಿ ಅವರು ಈಗಿನ ಜನರೇಶನ್ ರೀತಿ ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ರೀಲ್ಸ್​ಗಳನ್ನು ಮಾಡಿ ಹಂಚಿಕೊಳ್ಳುತ್ತಾರೆ. ಅವರ ಮಗಳ ಜೊತೆಯೂ ರೀಲ್ಸ್ ಮಾಡುತ್ತಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ