Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಆದ್ಯತೆ ನೀಡಲು ಸಕ್ಕರೆ ಸಚಿವರ ಮನವಿ

Advertisement
------------------------------------------------------ಸಕ್ಕರೆ ರಫ್ತಿಗೆ ಅನುಮತಿ ನೀಡಲು ಕೇಂದ್ರ ಸರ್ಕಾರಕ್ಕೆ ಆಗ್ರಹ

ಬೆಳಗಾವಿ: ಸಕ್ಕರೆ ರಫ್ತು ಮಾಡಲು ಕಾರ್ಖಾನೆಗಳಿಗೆ ಅನುಮತಿ ನೀಡಬೇಕೆಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ವಾರ್ಷಿಕ ಸರ್ವಸಾಧಾರಣ ಮಹಾ ಸಭೆಯ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಸಕ್ಕರೆ ರಫ್ತು ಮಾಡಲು ಅನುಮತಿ ನೀಡಿದರೆ ಮಾತ್ರ ಕಬ್ಬು ಬೆಳೆಗಾರರ ಹಿತರಕ್ಷಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಬ್ಬು ಬೆಳೆಗಾರರಿಗೆ ಬಾಕಿ ಬಿಲ್ ಪಾವತಿ ಮಾಡಲು ಕಾರ್ಖಾನೆಗಳಿಗೆ ಸಕ್ಕರೆ ರಫ್ತಿಗೆ ಅನುಮತಿ ಇದ್ದರೆ ಸಮಸ್ಯೆಯಾಗದು. ರಫ್ತಿಗೆ ಅನುಮತಿ ನೀಡದ ಕಾರಣ ಹಲವು ಕಾರ್ಖಾನೆಗಳು ರೈತರಿಗೆ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ. ಬಿಲ್ ಪಾವತಿ ಮಾಡಲು ಕಾರ್ಖಾನೆಗಳ ಬಳಿ ಪ್ರತ್ಯೇಕ ಬಂಡವಾಳ ಇರುವುದಿಲ್ಲ. ಕೇಂದ್ರ ಸರ್ಕಾರ ಇದನ್ನು ಮನಗಂಡು ರೈತರ ಹಿತರಕ್ಷಣೆಯ ಪೂರಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ತೊಗರಿ ನಮ್ಮಲ್ಲೆ ಗಣನೀಯ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಆದರೂ, ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದ ತೊಗರಿ ಬೆಲೆ ಕೆ.ಜಿ.ಗೆ ರೂ.90/- ಗೆ ಕುಸಿದಿದೆ. ಹೀಗಾಗಿ, ಯಾವುದನ್ನು ಆಮದು ಮಾಡಿಕೊಳ್ಳಬೇಕು, ಯಾವುದನ್ನು ರಫ್ತು ಮಾಡಲು ಅನುಮತಿ ನೀಡಬೇಕು ಎಂಬ ಬಗ್ಗೆ ಕೇಂದ್ರ ಚಿಂತಿಸಬೇಕು.

ಈರುಳ್ಳಿ ಮತ್ತು ಟೊಮ್ಯಾಟೊ ಬೆಲೆ ಕುಸಿದು ರೈತರು ಅವುಗಳನ್ನು ರಸ್ತೆಗೆ ಸುರಿಯುವ ಪರಿಸ್ಥಿತಿ ಬರಬಾರದು. ಈ ನಿಟ್ಟಿನಲ್ಲಿ ಕೇಂದ್ರ ಚಿಂತನೆ ಮಾಡಬೇಕು ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ