ಬೆಂಗಳೂರು: ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಆಧರಿಸಿ ನೇಮಕಾತಿ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾರ್ಚ್ 27ರಂದು ವಿಶೇಷ ಸಂಪುಟ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.
ಬಲ ಸಮುದಾಯ ನಾಯಕರು ಒಳ ಮೀಸಲಾತಿಗೆ ಒಪ್ಪಿಕೊಂಡಿದ್ದಾರೆ. ಬಲ, ಎಡ ಸಮುದಾಯಗಳಿಗೆ ಸರಿಸಮವಾಗಿ ಒಳಮೀಸಲಾತಿ ಹಂಚಿಕೆ ಮಾಡಲಾಗುವುದು. ಮಾರ್ಚ್ 27ರವರೆಗೆ ಯಾವುದೇ ನೇಮಕಾತಿ ಅಧಿಸೂಚನೆ ಪ್ರಕಟಣೆ ಆಗುವುದಿಲ್ಲ ಎಂದು ಹೇಳಿದ್ದಾರೆ.




