ಮುದಗಲ್ಲ:ತ್ರಿಪದಿ ಕವಿ ಸರ್ವಜ್ಞ ಜಯಂತಿ ಯನ್ನು ಮುದಗಲ್ಲ ಪುರಸಭೆಯ ವತಿಯಿಂದ ಗುರುವಾರ ಆಚರಿಸಲಾಯಿತು.
ಪುರಸಭೆ ಸಿಬ್ಬಂದಿ ಚನ್ನಮ್ಮ ದಳವಾಯಿ ಹಿರೇಮಠ ಅವರು ಸರ್ವಜ್ಞ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ, ಕುಂಬಾರ ಸಮಾಜದ ಮಂಜುನಾಥ ಕುಂಬಾರ ಪತ್ರಕರ್ತರಾದ ಅವರು ಸರ್ವಜ್ಞರ ವಚನಗಳು ಜೀವನದ ಅನುಭವಗಳನ್ನು ಒಳಗೊಂಡಿವೆ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಯತ್ನ ವಚನಗಳ ಮೂಲಕ ನಡೆದಿದೆ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮೈಬುಬೂ ಸಾಬ ಕಡ್ಡಿಪುಡಿ , ಪುರಸಭೆ ಕಂದಾಯ ವಿಭಾಗದ ಅಧಿಕಾರಿ, ಜೆಸ್ಸ್ ಪಾಲ್ ಸಿಂಗ್ ,ನೈಮಲ್ಯ ಅಧಿಕಾರಿಯಾದ ಆರೀಪ್ ಹುನ್ನಿಸಾ ಬೇಗಂ , ಸಿಬ್ಬಂದಿ ಗಳಾದ ನಿಸಾರ್ ಅಹಮದ್, ಜಿಲಾನಿ ಪಾಶ ಇತರರು ಉಪಸ್ಥಿತರಿದ್ದರು..
ವರದಿ: ಮಂಜುನಾಥ ಕುಂಬಾರ