Ad imageAd image

ಬಾಂಬ್ ಹಾಕಲು ಜಮೀರ್ ಹೋಗಬೇಕಿನಿಲ್ಲ, ನಮ್ಮ ಸೈನಿಕರಿದ್ದಾರೆ : ಸತೀಶ್ ಜಾರಕಿಹೊಳಿ

Bharath Vaibhav
ಬಾಂಬ್ ಹಾಕಲು ಜಮೀರ್ ಹೋಗಬೇಕಿನಿಲ್ಲ, ನಮ್ಮ ಸೈನಿಕರಿದ್ದಾರೆ : ಸತೀಶ್ ಜಾರಕಿಹೊಳಿ
satish jarkiholi
WhatsApp Group Join Now
Telegram Group Join Now

ಹುಬ್ಬಳ್ಳಿ : ಜಮ್ಮು-ಕಾಶ್ಮೀರದ ಪಹಲ್ಗಾಮ್​​​ನಲ್ಲಿ ಏ.22ರಂದು ನಡೆದ ಪಾಕ್ ಪೋಷಿತ ಉಗ್ರ ದಾಳಿ ಪ್ರಕರಣ ಕುರಿತುಂತೆ ಪ್ರತಿಕ್ರಿಯೆ ನೀಡಿದ್ದ ಸಚಿವ ಜಮೀರ್ ಅಹಮದ್ ಅವರು ಖುದ್ದು ತಾವೇ ಬಾಂಬ್ ಕಟ್ಟಿಕೊಂಡು ಪಾಕ್ ವಿರುದ್ಧ ಯುದ್ಧಕ್ಕೆ ಸಿದ್ಧ ಎಂದಿದ್ದರು.

ಈ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ಬಾಂಬ್ ಹಾಕಲು ಕಾಂಗ್ರೆಸ್, ಬಿಜೆಪಿಯವರು ಹೋಗಲ್ಲ. ಜಮೀರ್ ಅವರು ಹೋಗಬೇಕಿನಿಲ್ಲ. ಭದ್ರತಾ ಕರ್ತವ್ಯ ನಿರ್ವಹಿಸಲು ನಮ್ಮ ಸೈನಿಕರಿದ್ದಾರೆ ಎಂದರು.

ನಮ್ಮ ದೇಶ ಕಾಯುವ 22 ಲಕ್ಷ ಯೋಧರಿದ್ದು, ಅವರು ತಮ್ಮ ಕರ್ತವ್ಯ ಮಾಡುತ್ತಾರೆ. ಯುದ್ಧ ಮಾಡುವ ವಿಚಾರ ಕೇಂದ್ರ ಸರ್ಕಾರಕ್ಕೆ ಬಿಟ್ಟದ್ದು. ಯಾವಾಗ, ಏನು ಮಾಡಬೇಕು ಎಂದು ಕೇಂದ್ರ ಸರ್ಕಾರವೇ ನೀರ್ಧರಿಸುತ್ತದೆ. ಸೂಕ್ತ ಸಮಯದಲ್ಲಿ ಕೇಂದ್ರ ತೀರ್ಮಾನ ಕೈಗೊಳ್ಳಲಿದೆ. ಹೀಗಾಗಿ ಸಮೀರ್ ಅವರು ಬಾಂಬ್ ಹಾಕಲು ಹೋಗುವುದು ಬೇಡ ಎಂದು ಪರೋಕ್ಷವಾಗಿ ಹೇಳಿದರು.

ದೇಶಕ್ಕಾಗಿ ಯಾವುದೇ ತ್ಯಾಗಕ್ಕೂ ನಾನು ಸಿದ್ಧನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನುಮತಿ ನೀಡಿದರೆ ನಾನೇ ದೇಹಕ್ಕೆ ಬಾಂಬ್ ಕಟ್ಟಿಕೊಂಡು ಹೋಗಲು ರೆಡಿ.

ನಾನು ಜೋಶ್ ಅಥವಾ ತಮಾಷೆಗೆ ಈ ಮಾತು ಹೇಳುತ್ತಿಲ್ಲ. ಯುದ್ಧಕ್ಕೆ ಕರೆಯಲಿ ಅಲ್ಲಾಹು ಮತ್ತು ದೇವರ ಆಣೆಗೂ ಆತ್ಮಾಹುತಿ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗ್ತಿನಿ ಎಂದು ಇತ್ತೀಚೆಗೆ ಹೊಸಪೇಟೆಯಲ್ಲಿ ಜಮೀರ್ ಅವರು ಹೇಳಿಕೆ ನೀಡಿದ್ದರು.

ಅವರ ಈ ಹೇಳಿಕೆಗೆ ಬಿಜೆಪಿ ನಾಯಕರೂ ತೀವ್ರವಾಗಿ ಟೀಕಿಸಿದ್ದಾರೆ. ಜಮೀರ್ ಅವರು ಮಾತನಾಡದೇ ಸುಮ್ಮನ್ನಿದ್ದರೆ ಸಾಕು. ಅದೇ ದೇಶಕ್ಕೆ ಅವರು ಮಾಡುವ ದೊಡ್ಡ ಸೇವೆ. ಸುಮ್ಮನೇ ಬಾಲಿಶ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ನಿನ್ನೆಯಷ್ಟೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೂ ಟಾಂಗ್ ನೀಡಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!