Ad imageAd image

ಪದ್ಮಭೂಷಣ ಕರ್ನಾಟಕದ ಜನತೆಗೆ ಅರ್ಪಿಸುತ್ತೇನೆ : ನಟ ಅನಂತನಾಗ್ 

Bharath Vaibhav
ಪದ್ಮಭೂಷಣ ಕರ್ನಾಟಕದ ಜನತೆಗೆ ಅರ್ಪಿಸುತ್ತೇನೆ : ನಟ ಅನಂತನಾಗ್ 
WhatsApp Group Join Now
Telegram Group Join Now

ಬೆಂಗಳೂರು: ಹಿರಿಯ ನಟ ಅನಂತ್ ನಾಗ್ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ಪದ್ಮಭೂಷಣ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳ ಪಯಣ ನನ್ನದು. ಅದಕ್ಕೂ ಮೊದಲು 5 ವರ್ಷಗಳ ಕಾಲ ರಂಗಭೂಮಿಯಲ್ಲಿದ್ದೆ.

ಬಳಿಕ ಚಿತ್ರರಂಗಕ್ಕೆ ಬಂದೆ. ಕನ್ನಡಿಗರು ನನ್ನ ಮೇಲೆ ಅತೀವ ಪ್ರೀತಿ ತೋರಿದ್ದಾರೆ. ಕಳೆದ ಮೂರು ವರ್ಷಗಳಿಂದ ನನ್ನ ಹೆಸರನ್ನು ಪ್ರಶಸ್ತಿಗೆ ಸೂಚಿಸಿದ್ದರು. ಕೊನೆಗೂ ಪ್ರಶಸ್ತಿ ಬಂದಿರುವುದಕ್ಕೆ ಸಂತಸವಾಗಿದೆ. ಈ ಗೌರವವನ್ನು ಕರ್ನಾಟಕದ ಜನತೆಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕರಾ ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿ ಪ್ರಕಟಿಸಿದೆ. ರಾಜ್ಯದ 9 ಸಾಧಕರು ಈ ಬಾರಿಯ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!