Ad imageAd image

ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ MRPS ನಿಂದ ತೀವ್ರ ಖಂಡನೆ

Bharath Vaibhav
ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ MRPS ನಿಂದ ತೀವ್ರ ಖಂಡನೆ
WhatsApp Group Join Now
Telegram Group Join Now

ಗುರುಮಾಠಕಲ್ : ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಕ್ರೂರ ಉಗ್ರ ದಾಳಿ ದೇಶದ ಶಾಂತಿ ಮತ್ತು ಏಕತೆಗೆ ಅಡ್ಡಿಯುಂಟುಮಾಡುವ ಅಮಾನುಷ ಕೃತ್ಯವಾಗಿದೆ. ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ದೇಶಭಕ್ತ ನಾಗರಿಕರ ಅಗಲಿಕೆಯ ನೋವು ದೇಶದ ಜನತೆಯನ್ನು ವಿಷಾದದಲ್ಲಿ ಮುಳುಗಿಸಿದೆ. ಅದಕ್ಕೆ ಅವರಿಗೆ ತಕ್ಕ ಪಾಠ ಕಲಿಸಲು ಮುಂದಾಗಬೇಕು

ಮಾದಿಗ ದಂಡೋರದ ಗುರುಮಾಠಕಲ್ ತಾಲೂಕ ಅಧ್ಯಕ್ಷ ರವಿ ಬುರನೋಳ್ ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ ಇಂತಹ ಗೊಂದಲ ಹಾಗೂ ಹಿಂಸಾತ್ಮಕ ಘಟನೆಗಳಿಗೆ ಯಾವುದೇ ರೀತಿಯ ಕ್ಷಮೆ ನೀಡಲಾಗದು ಅವರಿಗೆ ತಕ್ಕ ಪಾಠ ಕಲಿಸಲು ನಮ್ಮ ಸರಕಾರಗಳು ಮುಂದಾದಗಬೇಕು ಎಂದು ರವಿ ಬುರನೋಳ್ ಮಾದಿಗ ದಂಡೋರ ತಾಲೂಕ ಅಧ್ಯಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಕೂಡಲೇ ಈ ಘಟನೆಯಲ್ಲಿ ಭಾಗಿಯಾದ ಉಗ್ರರು ಹಾಗೂ ಅವುಗಳ ಬೆಂಬಲಿಗರ ವಿರುದ್ಧ ಕಠಿಣ ಗಂಭೀರ ಕಾನೂನು ಕ್ರಮ ಜರುಗಿಸಬೇಕು. ಅವರನ್ನು ಶೀಘ್ರ ಪತ್ತೆಹಚ್ಚಿ ಕಾನೂನು ವಿಧಿಯಾದ ಶಿಕ್ಷೆ ನೀಡಬೇಕು.

ಇದೇ ಸಂದರ್ಭದಲ್ಲಿ, ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸರ್ಕಾರ ತಕ್ಷಣ ಪರಿಹಾರ ಘೋಷಿಸಬೇಕು ಮತ್ತು ಅಗತ್ಯ ಪುನರ್ವಸತಿ ಸೇವೆಗಳನ್ನು ಒದಗಿಸಬೇಕು ಎಂದು ಮಾದಿಗ ದಂಡೋರ ಸರಕಾರಕ್ಕೆ ಒತ್ತಾಯಿಸುತ್ತದೆ ಹಾಗೂ ದೇಶದಲ್ಲಿ ಶಾಂತಿ ಮತ್ತು ಭದ್ರತೆ ಬಲವಾಗಿರಬೇಕಾದರೆ, ಭದ್ರತಾ ವ್ಯವಸ್ಥೆಯನ್ನು ತಕ್ಷಣ ಬಲಪಡಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಇದರತ್ತ ಗಂಭೀರವಾಗಿ ಗಮನ ಹರಿಸಬೇಕೆಂದು ಎಂದು ಒತ್ತಾಯಿಸುತ್ತಿದ್ದೇವೆ.

ವರದಿ : ರವಿ ಬುರನೋಳ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!