Ad imageAd image

ಪಾಕ್ ಅಪ್ರಚೋದಿತ ಗುಂಡಿನ ದಾಳಿ : ಓರ್ವ ಯೋಧ ಹುತಾತ್ಮ 

Bharath Vaibhav
ಪಾಕ್ ಅಪ್ರಚೋದಿತ ಗುಂಡಿನ ದಾಳಿ : ಓರ್ವ ಯೋಧ ಹುತಾತ್ಮ 
WhatsApp Group Join Now
Telegram Group Join Now

ಭಾರತವು ಪಾಕ್ ಮೇಲೆ ವೈಮಾನಿಕ ದಾಳಿಯ ಬಳಿಕ ಪಾಕ್ ಸೇನೆ ಎಲ್‌ಒಸಿ ಗಡಿ ಉದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ಮಾಡಿದ್ದಲ್ಲದೆ, ಕಳೆದ ಎರಡು ದಿನಗಳಿಂದ ಶೆಲ್ ದಾಳಿ ನಡೆಸಲಾಗುತ್ತಿದೆ. ಈ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ವೀರ ಮರಣವನ್ನಪ್ಪಿದ್ದಾರೆ.

ಭಾರತೀಯ ಸೇನೆಯು ಉಗ್ರರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದರೆ, ಅತ್ತ ಪಾಕ್ ಮಾತ್ರ ನಾಗರಿಕರನ್ನು ಗುರಿಯಾಗಿಸಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಶೆಲ್ ದಾಳಿ ಮಾಡಲಾಗುತ್ತಿದೆ. ಈ ದಾಳಿಯಲ್ಲಿ ಇದುವರೆಗೆ 31 ಜನ ಅಮಾಯಕರು ಮೃತಪಟ್ಟಿದ್ದಾರೆ.

ಪಾಕ್ ಈ ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡುವ ವೇಳೆ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಅವರಿಗೆ ಗುಂಡೇಟು ತಗುಲಿದ್ದು, ಕೊನೆಯುಸಿರಿರುವವರೆಗೂ ಧೈರ್ಯದಿಂದ ಹೋರಾಡಿ ವೀರ ಮರಣವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ದೃಢಪಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!