Ad imageAd image

ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ತಾನ ಅಧಿಕಾರಿಯ ಉಚ್ಛಾಟನೆ

Bharath Vaibhav
ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ತಾನ ಅಧಿಕಾರಿಯ ಉಚ್ಛಾಟನೆ
WhatsApp Group Join Now
Telegram Group Join Now

————————————–24 ಗಂಟೆಯಲ್ಲಿ ಭಾರತ ತೊರೆಯಲು ಅವಕಾಶ

ನವದೆಹಲಿ: ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಲೇ ಬೇಹುಗಾರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತವು ಮಂಗಳವಾರ ಹುದ್ದೆಯಿಂದ ಉಚ್ಚಾಟನೆ ಮಾಡಿದೆ. ವಿದೇಶಾಂಗ ಸಚಿವಾಲಯದ (MEA) ಅಧಿಕಾರಿಯೊಬ್ಬನ ಮೇಲೆ ಈ ಕ್ರಮ ಜಾರಿಯಾಗಿದ್ದು, ದೇಶ ತೊರೆಯಲು 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ.

ಇದರ ಬೆನ್ನಲ್ಲೇ, ಇಸ್ಲಾಮಾಬಾದ್‌ನಲ್ಲಿರುವ ಭಾರತದ ಹೈಕಮಿಷನ್‌ನಲ್ಲಿನ ಸಿಬ್ಬಂದಿಯನ್ನು ಸಹ ಬೇಹುಗಾರಿಕೆ ಆರೋಪದ ಒಪ್ಪಿಕೊಳ್ಳಲಾಗದ ವ್ಯಕ್ತಿ ಎಂದು ಘೋಷಿಸಿ, ಆ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ತಿಳಿಸಿದೆ. ಅಧಿಕಾರಿ ಮತ್ತು ಕುಟುಂಬ ಸದಸ್ಯರಿಗೆ 24 ಗಂಟೆಗಳಲ್ಲಿ ಪಾಕಿಸ್ತಾನವನ್ನು ತೊರೆಯುವಂತೆ ತಿಳಿಸಲಾಗಿದೆ ಎಂದು ಅದು ಹೇಳಿದೆ.

ಪಹಲ್ಗಾಮ್​ ದಾಳಿ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಮಿಲಿಟರಿ ಮುಖಾಮುಖಿಯ ಬಳಿಕ ಉಭಯ ದೇಶಗಳ ನಡುವೆ ಹೆಚ್ಚಿದ ಉದ್ವಿಗ್ನತೆಯ ನಡುವೆ ಪರಸ್ಪರ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನಿ ಪ್ರಜೆಯ ವಿರುದ್ಧದ ನಿರ್ದಿಷ್ಟ ಆರೋಪಗಳನ್ನು ವಿದೇಶಾಂಗ ಸಚಿವಾಲಯ ಬಹಿರಂಗಪಡಿಸದಿದ್ದರೂ, ಇದು ಪಂಜಾಬ್ ಪೊಲೀಸರು ತನಿಖೆ ನಡೆಸುತ್ತಿರುವ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ಭಾರತದಲ್ಲಿ ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಸರ್ಕಾರ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಅಧಿಕಾರಿಗೆ 24 ಗಂಟೆಗಳ ಒಳಗೆ ಭಾರತ ತೊರೆಯುವಂತೆ ಸೂಚಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!