Ad imageAd image

ಕೇಂದ್ರ ಸಚಿವರಾದ ಮೇಲೆ ಇಂದು ರಾಜ್ಯಕ್ಕೆ ಕುಮಾರಸ್ವಾಮಿ : ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ಭಾರತ ಸರ್ಕಾರದ ಸಂಪುಟ ದರ್ಜೆ ಉಕ್ಕು ಮತ್ತು, ಬೃಹತ್ ಕೈಗಾರಿಕೆ ಖಾತೆ ನೂತನ ಸಚಿವರಾಗಿ ಅಧಿಕಾರವಹಿಸಿಕೊಂಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ರಾಜ್ಯಕ್ಕೆ ಮೊದಲ ಭೇಟಿ ನೀಡಲಿದ್ದಾರೆ.

ಜೂನ್ 14ರ ಶುಕ್ರವಾರದಂದು ಬೆಳಗ್ಗೆ ದೆಹಲಿಯಿಂದ ಹೊರಟು 11:30 ಕ್ಕೆ ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಕುಮಾರಸ್ವಾಮಿಯವರಿಗೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 1 ಗಂಟೆಗೆ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ಆಗಮಿಸಲಿರುವ ಹೆಚ್.ಡಿ. ಕುಮಾರಸ್ವಾಮಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!