Ad imageAd image
- Advertisement -  - Advertisement -  - Advertisement - 

ನಟ ದರ್ಶನ್ ಸೇರಿ ಸಹಚರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ 

Bharath Vaibhav
ನಟ ದರ್ಶನ್ ಸೇರಿ ಸಹಚರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ 
WhatsApp Group Join Now
Telegram Group Join Now

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ಸಾಕ್ಷ್ಯಗಳ ಒಟ್ಟುಗೂಡಿಸುವಿಕೆ, ತಂತ್ರಜ್ಞಾನ ಬಳಸಿ ಕಲೆಹಾಕಿರುವ ಕೊಲೆ ಸಂಬಂಧಿತ ಅಂಶಗಳು, ಕೊಲೆಯಲ್ಲಿ ಆರೋಪಿಗಳ ಪಾತ್ರ, ಅವರ ವಿರುದ್ಧ ಇರುವ ಸಾಕ್ಷ್ಯಗಳು ಸೇರಿದಂತೆ ಎಲ್ಲವನ್ನೂ ವಿಸ್ತರವಾಗಿ ಚಾರ್ಜ್ ಶೀಟ್ ನಲ್ಲಿ ಸೇರಿದಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಎಫ್ ಎಸ್ ಎಲ್ ಗೆ ಕಳುಹಿಸಲಾಗಿರುವ ಕೆಲವು ಸಾಕ್ಷ್ಯಗಳ ವರದಿ ಶೀಘ್ರವೇ ಬರಲಿದ್ದು, ಮುಖ್ಯವಾಗಿ ಪಟ್ಟಣಗೆರೆ ಶೆಡ್ ನಲ್ಲಿ ಸಿಕ್ಕ 2 ಮಾದರಿಗಳು, ಸ್ಕಾರ್ಪಿಯೋ ಕಾರಿನಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್, ಪವಿತ್ರಾಗೌಡ, ನಟ ದರ್ಶನ್ ಮನೆಯ ಸಿಸಿಟಿವಿಯ ವಿಡಿಯೋಗಳು, ಪಟ್ಟಣಗೆರೆ ಶೆಡ್ ನ ಸೆಕ್ಯೂರಿಟಿ ಗಾರ್ಡ್ ಸಿಸಿಟಿವಿ ದೃಶ್ಯವಳಿಗಳು, ಕೊಲೆ ಆರೋಪಿಗಳ ಮೊಬೈಲ್ ಮಾಹಿತಿ ಕುರಿತು ಎಫ್ ಎಸ್ ಎಲ್ ವರದಿ ಬರಲಿದೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿರುವ ಪೊಲೀಸರು ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಸಿಸಿಟಿವಿ ವಿಡಿಯೋ ಜೊತೆಗೆ ಫೋಟೋ ಮ್ಯಾಚಿಂಗ್ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಸಂಗ್ರಹಿಸಿರುವ ಸಿಸಿಟಿವಿ ದೃಶ್ಯಗಳ ವಿಶೂವಲ್ ಕಂಪ್ಯಾರಿಸನ್ ಗೆ ಎಫ್ ಎಸ್ ಎಲ್ ಗೆ ಕಳುಹಿಸಲಾಗಿದ್ದು, ಸಿಸಿಟಿವಿ ದೃಶ್ಯದ ಜೊತೆಗೆ ಆರೋಪಿಗಳ ಫೋಟೋಗಳನ್ನು ಕಳುಹಿಸಲಾಗಿದೆ. ಇದರಲ್ಲಿ ಎಲ್ಲಾ ಆರೋಪಿಗಳ ಕಣ್ಣು, ಬಣ್ಣ, ದೇಹ, ಬಾಯಿ, ತುಟಿ, ಮೂಗಿನ ಶೇಪ್ ಗಳ ಕಂಪ್ಯಾರಿಸನ್ ಮಾಡಲು ಮುಂದಾಗಿದೆ ಎನ್ನಲಾಗಿದೆ.

 

 

WhatsApp Group Join Now
Telegram Group Join Now
Share This Article
error: Content is protected !!