ಹಳಿಯಾಳ: ಹೌದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಹಳಿ ಯಾಳ ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಮಾಡುವ ಎಲ್ಲಾ ಪೌರಕಾರ್ಮಿಕರು ಹಾಗೂ ಪೌರ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪುರಸಭೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯ ಅಧಿಕಾರಿಗಳು ಆದ ಅಶೋಕ್ ಸಾನೆನನವರ್ ಹಾಗೂ ವ್ಯವಸ್ಥಾಪಕ ಈಶ್ವರ ಕೊಡ್ಲಿ ಅವರಿಗೆ ಎಲ್ಲಾ ಪೌರಕಾರ್ಮಿಕ, ಪೌರ ನೌಕರರ ಸಿಬ್ಬಂದಿಗಳು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಸಹ ಇವರ ಹೋರಾಟಕ್ಕೆ ಬೆಂಬಲ ಕೊಟ್ಟು ನಂತರ ಇವರ ಅಭಿಪ್ರಾಯದ ಸಮಗ್ರ ವರದಿ ತಯಾರಿಸಿ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದ್ರೂ ಈ ಪೌರಕಾರ್ಮಿಕರು ಹಾಗೂ ಪೌರ ನೌಕರರ ಸಮಸ್ಯೆಗಳು ಈಡೇರಬಹುದೇ ಎಂಬುದನ್ನು ಕಾದುನೋಡಬೇಕಿದೆ.
ಬಸವರಾಜು




