Ad imageAd image

ಬಾಲ್ಯ ವಿವಾಹದ ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರಿಗೂ ಶಿಕ್ಷೆ : ಕಾಯ್ದೆ ತಿದ್ದುಪಡಿ

Bharath Vaibhav
ಬಾಲ್ಯ ವಿವಾಹದ ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರಿಗೂ ಶಿಕ್ಷೆ : ಕಾಯ್ದೆ ತಿದ್ದುಪಡಿ
WhatsApp Group Join Now
Telegram Group Join Now

ಬೆಂಗಳೂರು: ಬಾಲ್ಯವಿವಾಹ ನಿಷೇಧ ತಿದ್ದುಪಡಿ ಕಾಯ್ದೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಬಾಲ್ಯವಿವಾಹ ಸಂಪೂರ್ಣ ನಿಷೇಧ.ಬಾಲ್ಯವಿವಾಹಕ್ಕೆ ಒತ್ತಡ ಹೇರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.

ಬಾಲ್ಯವಿವಾಹಕ್ಕೆ ಕುಟುಂಬದವರು ಒಪ್ಪಿಗೆ ನೀಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಯಾರೇ ಒತ್ತಡ ಹಾಕಿದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನಲ್ಲಿ ಕಾನೂನು ಜಾರಿಗೆ ಬಂದಿದೆ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!