Ad imageAd image

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ : ಆರ್. ಮಂಜುನಾಥ್ ಭವಿಷ್ಯ

Bharath Vaibhav
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ : ಆರ್. ಮಂಜುನಾಥ್ ಭವಿಷ್ಯ
WhatsApp Group Join Now
Telegram Group Join Now

ಬೆಂಗಳೂರು : ಪೀಣ್ಯ,ದಾಸರಹಳ್ಳಿ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಯವರಿಗೆ ವಿರೋಧಿ ಅಲೆ ಇದ್ದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡರವರು ಗೆಲ್ಲುವುದು ಖಚಿತ’, ಎಂದು ಮಾಜಿ ಶಾಸಕ ಆರ್ ಮಂಜುನಾಥ್ ಹೇಳಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣೆಯ ಪ್ರಯುಕ್ತ ಕಮ್ಮಗೊಂಡನಹಳ್ಳಿಯ ಸಂಸ್ಕೃತಿ ಗ್ರಾಂಡ್ ಹೋಟೆಲ್ ನಲ್ಲಿ ನಡೆದ ಶೆಟ್ಟಿಹಳ್ಳಿ ವಾರ್ಡಿನ ಕಾಂಗ್ರೆಸ್ ಮುಖಂಡರು ಹಾಗು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ನಂತರ ಮಾತನಾಡಿದ ಮಾಜಿ ಬಿಬಿಎಂಪಿ ಸದಸ್ಯ ಕೆ.ನಾಗಭೂಷಣ್, ‘ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಜನರನ್ನು ತಲುಪಿವೆ. ಜನರು ಆ ಋಣವನ್ನು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ತೀರಿಸಲಿದ್ದಾರೆ’, ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಅಬ್ದುಲ್ ವಾಜಿದ್, ಮಾಜಿ ನಗರಸಭಾ ಅಧ್ಯಕ್ಷ ಕೆ.ಸಿ.ಅಶೋಕ್, ಗ್ಯಾರೆಂಟಿ ಯೋಜನೆಯ ದಾಸರಹಳ್ಳಿಯ ಅಧ್ಯಕ್ಷ ಕೆ.ಸಿ.ವೆಂಕಟೇಶ್ (ದೇವೇಗೌಡ), ಬಷೀರ್, ಶ್ರೀವಲ್ಲಿ ಮೂರ್ತಿ, ಕೆಂಪಹೋಬಳಯ್ಯ, ನರಸಿಂಹ ನಾಯಕ್, ಬಾರ್ ಶ್ರೀನಿವಾಸ್, ಕೃಷ್ಣಮೂರ್ತಿ, ಹನುಮಂತರಾಜು, ರೀಹಾನಾ ಸೇರಿದಂತೆ ಬ್ಲಾಕ್ ಅಧ್ಯಕ್ಷರುಗಳು, ವಾರ್ಡ್ ಅಧ್ಯಕ್ಷರು ಕಾರ್ಯಕರ್ತರು ಮುಂತಾದವರು ಭಾಗವಹಿಸಿದ್ದರು.

ವರದಿ: ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
Share This Article
error: Content is protected !!