ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆಗಳನ್ನು ವಂಚಿಸಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮತದಾರರ ಪಟ್ಟಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ, ಕರ್ನಾಟಕದ ಮತದಾರರ ಪಟ್ಟಿಯನ್ನು ಅಕ್ರಮ ನಡೆದಿದೆ ಎಂದು ಆರೋಪಿಸಿದರು.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ಕ್ಷೇತ್ರದಲ್ಲಿ ಬೃಹತ್ ಮತ ಕಳ್ಳತನ ನಡೆದಿದೆ ಎಂದು ಪಿಪಿಟಿ ಮೂಲಕ ತಿಳಿಸಿದರು. ಮಹದೇವಪುರ ಕ್ಷೇತ್ರದಲ್ಲಿ 6.5 ಲಕ್ಷ ಮತಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ ನಡೆದಿದೆ ಎಂದು ಹೇಳಿದರು.
ಕಾಂಗ್ರೆಸ್ ನಡೆಸಿದ ಆಂತರಿಕ ಸಂಶೋಧನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು, ಅಮಾನ್ಯ ವಿಳಾಸಗಳು, ಬೃಹತ್ ಮತದಾರರು ಇರುವುದು ಕಂಡುಬಂದಿದೆ” ಎಂದು ಅವರು ಹೇಳಿದರು.




