ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಮಂಗಳವಾರ (ಅ.07) ಇಬ್ಬರು ಪ್ರಮುಖ ನಾಯಕರು ನಾಮಪತ್ರ ಸಲ್ಲಿಕೆ ಮಾಡಿದರು.
ಮಾಜಿ ಸಂಸದ ಹಾಗೂ ಬ್ಯಾಂಕಿನ ಮಾಜಿ ಅಧ್ಯಕ್ಷ ರಮೇಶ್ ಕತ್ತಿ ಹುಕ್ಕೇರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದರೆ, ಬೈಲಹೊಂಗಲ ಕ್ಷೇತ್ರದಿಂದ ಮಾಜಿ ಶಾಸಕ ವಿಶ್ವನಾಥ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ.
ಈ ಚುನಾವಣೆಯಲ್ಲಿ ಯಾವುದೇ ಪ್ಯಾನಲ್ ಇಲ್ಲ. ಆಯಾ ತಾಲೂಕಿನ ಮತದಾರರು ತಮಗೆ ಬೇಕಾದವರನ್ನು ಆಯ್ಕೆ ಮಾಡುತ್ತಾರೆ ಎಂದು ರಮೇಶ್ ಕತ್ತಿ ಹೇಳಿದರು.
ಹುಕ್ಕೇರಿ ಕ್ಷೇತ್ರದಿಂದ ತಾವು ಸ್ಪರ್ಧೆ ಮಾಡುತ್ತಿದ್ದು ಗೆದ್ದು ಬರುತ್ತೇನೆ ಎಂಬ ವಿಶ್ವಾಸ ಇದೆ ಎಂದು ರಮೇಶ್ ಕತ್ತಿ ಹೇಳಿದರು.




