ಉತ್ತರ ಪ್ರದೇಶ : ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಇಡೀ ವಿಶ್ವದ ಗಮನ ಸೆಳೆದಿದ್ದು ಈಗಾಗಲೇ ಪ್ರಧಾನಿ ಮೋದಿ ಸೇರಿದಂತೆ ವಿಶ್ವದ ಹಲವು ದೇಶದ ಗಣ್ಯರು ಕೂಡ ಪುಣ್ಯ ಸ್ನಾನದಲ್ಲಿ ಮಿಂದೆದ್ದಿದ್ದಾರೆ.
ಈ ಬೆನ್ನಲ್ಲೇ ಇದೀಗ ಮಹಾಕುಂಭ ಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಭಾಗಿಯಾಗಲಿದ್ದು ಪುಣ್ಯ ಸ್ನಾನದಲ್ಲಿ ಮಿಂದೇಳಲಿದ್ದಾರೆ.ಸೋಮವಾರ (ಫೆ.10) ರಂದು ದ್ರೌಪದಿ ಮುರ್ಮು ಪ್ರಯಾಗರಾಜ್ ಗೆ ಆಗಮಿಸಲಿದ್ದಾರೆ.
ಈ ಬಗ್ಗೆ ರಾಷ್ಟ್ರಪತಿ ಭವನ ಅಧಿಕೃತವಾಗಿ ದೃಢಪಡಿಸಿದ್ದು, ಅವರ ಆಗಮನಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.ಈಗಾಗಲೇ ಮಹಾ ಕುಂಭಮೇಳದಲ್ಲಿ ಜಿಗ್ಮೆ ಕೇಸರ್ ನಾಮ್ಗ್ಯೆಲ್ ವಾಂಗ್ಚುಕ್, ಅಮಿತ್ ಶಾ, ಸೇರಿದಂತೆ ಹಲವಾರು ಗಣ್ಯರು ಪುಣ್ಯ ಸ್ನಾನ ಮಾಡಿದ್ದಾರೆ.