ಚಿಟಗುಪ್ಪ : ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ಕಡ್ಡಾಯವಾಗಿ E KYC ಮಾಡಿಸಿಕೊಳ್ಳಬೇಕು ಎಂದು ಚಿಟಗುಪ್ಪ ತಹಸೀಲ್ದಾರರಾದ ಮಂಜುನಾಥ ಪಂಚಾಳ ತಿಳಿಸಿದ್ದಾರೆ.
ಪಟ್ಟಣದ ತಹಸೀಲ್ ಕಛೇರಿಯಲ್ಲಿ ಮಾಧ್ಯಮ ಜೊತೆಗೆ ಮಾತನಾಡಿದ ಅವರು
ಪಡಿತರ ಚೀಟಿದಾರರು ನಿಮ್ಮ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಂಬ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿಮ್ಮ ಗ್ರಾಮದ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ ಪರಿಶೀಲಿಸಿಕೊಳ್ಳಬೇಕು
ಪಡಿತರ ಚೀಟಿದಾರರ E-kyc ಆಗದೇ ಇರುವವರ ಮಾಹಿತಿಯನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರದರ್ಶಿಸಲಾಗಿದ್ದು,ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ (E-kyc) ಮಾಡಿಕೊಂಡು ಪಡಿತರ ಸೌಲಭ್ಯ ಪಡೆಯಬೇಕು ಎಂದು ತಾಲ್ಲೂಕಿನ ಸಾರ್ವಜನಿಕರಿಗೆ ಮಾಧ್ಯಮ ಮೂಲಕ ಮನವಿ ಮಾಡಿದರು.
ವರದಿ : ಸಜೀಶ ಲಂಬುನೋರ