Ad imageAd image

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ಬಹಿರಂಗ : ಆಘಾತಕಾರಿ ಅಂಶಗಳ ಬಯಲು 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ ಮತ್ತಷ್ಟು ರಕ್ಕಸ ಕೃತ್ಯಗಳು ಬಯಲಾಗಿವೆ.

ರೇಣುಕಾಸ್ವಾಮಿಯನ್ನು ‘ಡಿ’ ಗ್ಯಾಂಗ್ ಬೀಭತ್ಸವಾಗಿ ಕೊಲೆ ಮಾಡಿದೆ ಎಂಬುದು ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆ ವರದಿ ಬೆಚ್ಚಿ ಬೀಳಿಸುವಂತಿದೆ.ರೇಣುಕಾಸ್ವಾಮಿ ದೇಹದ 34 ಕಡೆ ಗಂಭೀರ ಗಾಯಗಳಾಗಿವೆ. ಪಕ್ಕೆಲುಬು ಮುರಿದು, ಮೂಳೆ ಶ್ವಾಸಕೋಶಕ್ಕೆ ಚುಚ್ಚಿಕೊಂಡಿದೆ.

ಆರೋಪಿಗಳ ಹೊಡೆತಕ್ಕೆ ದೇಹದ ಹಲವೆಡೆ ರಕ್ತ ಹೆಪ್ಪುಗಟ್ಟಿದೆ. ಮರ್ಮಾಂಗಕ್ಕೂ ಬಲವಾದ ಪೆಟ್ಟುಬಿದ್ದಿದೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ದರ್ಶನ್ ಹಾಗೂ ಗ್ಯಾಂಗ್ ಬೆಂಗಳೂರಿನ ಆರ್.ಆರ್.ನಗರದ ಪಟ್ಟಣಗೆರೆ ಶೆಡ್ ನಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!