Ad imageAd image

ಪಂಚಭೂತಗಳಲ್ಲಿ ಲೀನವಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್​​​

Bharath Vaibhav
ಪಂಚಭೂತಗಳಲ್ಲಿ ಲೀನವಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್​​​
WhatsApp Group Join Now
Telegram Group Join Now

ಬೆಂಗಳೂರು : ನಿವೃತ್ತ ಡಿಜಿಪಿ ಓಂ ಪ್ರಕಾಶ್​​​ ಅವರು ನಿನ್ನೆಯಷ್ಟೇ (ಏ.20) ಅವರ ಪತ್ನಿ ಪಲ್ಲವಿ ಮತ್ತು ಪುತ್ರಿಯಿಂದ ಕಗ್ಗೊಲೆಯಾಗಿದ್ದು, ಇಂದು ವಿಲ್ಸ್​​ನ ಗಾರ್ಡನ್​​​ನಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿತು.

ಓಂ ಪಕ್ರಾಶ್ ಅವರ ಪುತ್ರ ಕಾರ್ತಿಕೇಶ್ ಅವರು ಚಿತೆಗೆ ಅಗ್ನಿಸ್ಪರ್ಶ ನೀಡುವ ಮೂಲಕ ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಪೊಲೀಸ್ ಗೌರವದೊಂದಿಗೂ ಅಂತ್ಯಕ್ರಿಯೆ ನೆರವೇರಿದ್ದು, ಈ ಸಂದರ್ಭದಲ್ಲಿ ಹಲವು ಗಣ್ಯರು, ಸಂಬಂಧಿಕರು ಭಾಗಿಯಾಗಿದ್ದರು.

ಹೆಚ್​​​​​​ಎಸ್​​ಆರ್​ ಲೇಔಟ್​​​ನ ಮನೆಯಲ್ಲಿ ಓಂಪ್ರಕಾಶ್ ಅವರ ಪತ್ನಿ ಮತ್ತು ಪುತ್ರಿ ಸೇರಿ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ 10ಕ್ಕೂ ಹೆಚ್ಚು ಬಾರಿ ಚುಚ್ಚಿ ಹತ್ಯೆ ಮಾಡಿದ್ದರು. ಮೇಲ್ನೋಟಕ್ಕೆ ಆಸ್ತಿ ವಿಚಾರವಾಗಿ ಈ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪುತ್ರ ನೀಡಿದ ದೂರಿನಡಿ ಓಂಪ್ರಕಾಶ್ ಅವರ ಪತ್ನಿ ಮತ್ತು ಪುತ್ರಿಯನ್ನು ಪೊಲೀಸರು ವಶಕ್ಕೆ ಪಡೆದು ಸದ್ಯ ವಿಚಾರಣೆ ಚುರುಕುಗೊಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!