Ad imageAd image

ಪಾವಗಡದಲ್ಲಿ ಮರಳು ಮಾಫಿಯಾ ಅಟ್ಟಹಾಸ

Bharath Vaibhav
ಪಾವಗಡದಲ್ಲಿ ಮರಳು ಮಾಫಿಯಾ ಅಟ್ಟಹಾಸ
WhatsApp Group Join Now
Telegram Group Join Now

ಅಧಿಕಾರಿಗಳ ಕಣ್ಣೆದುರೇ ನದಿಗೆ ಕನ್ನ: ಪಿನಾಕಿನಿ ಮರಳು ಲೂಟಿ ಮಾಡುತ್ತಿರುವ ‘ಮಹೇಂದ್ರ’ ಮೃಗಗಳು!

ಪಾವಗಡ : ಶಾಂತಿ ಪ್ರಿಯ ಪಾವಗಡ ತಾಲೂಕಿನಲ್ಲಿ ಈಗ ಮರಳು ಮಾಫಿಯಾದ್ದೇ ಕಾರುಬಾರು.

ಕತ್ತಲಾಗುತ್ತಿದ್ದಂತೆ ಶುರುವಾಗುವ ಈ ಮರಳು ದಂದೆ, ಬೆಳ್ಳಂಬೆಳಗ್ಗೆ ಸೂರ್ಯ ಹುಟ್ಟುವವರೆಗೂ ಅವ್ಯಾಹತವಾಗಿ ಸಾಗುತ್ತಿದೆ. ಉತ್ತರ ಪಿನಾಕಿನಿ ನದಿಯ ಒಡಲನ್ನು ಬಗೆಯುತ್ತಿರುವ ಕಿರಾತಕರು, ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಸುಣ್ಣ ಬಳಿಯುತ್ತಿದ್ದಾರೆ.

​ಇಂದು ಮುಂಜಾನೆ 5:30ರ ಸುಮಾರಿಗೆ ಪಳವಳ್ಳಿ ರಸ್ತೆಯ ತಿಮ್ಮಾಪುರ ಗ್ರಾಮದಿಂದ ಪಾವಗಡ ಪಟ್ಟಣಕ್ಕೆ ಅಗ್ನಿಶಾಮಕ ದಳದ ಕಚೇರಿ ಮಾರ್ಗವಾಗಿ ಅಕ್ರಮ ಮರಳು ಹೊತ್ತ ಮಹೇಂದ್ರ ಟ್ರ್ಯಾಕ್ಟರ್ (ಸಂಖ್ಯೆ: KA 06 TC 8547) ರಾಜಾರೋಷವಾಗಿ ನುಗ್ಗಿದೆ.
​ಡ್ರೈವರ್ ಅತಿರೇಕ: ಒಂದು ಕೈಯಲ್ಲಿ ಸ್ಟೀರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್! ಸಾರ್ವಜನಿಕರ ಪ್ರಾಣದ ಬಗ್ಗೆ ಕಿಂಚಿತ್ತೂ ಭಯವಿಲ್ಲದೆ, ಮೊಬೈಲ್‌ನಲ್ಲಿ ಮಾತನಾಡುತ್ತಲೇ ಮರಳು ಸಾಗಿಸುತ್ತಿದ್ದ ದೃಶ್ಯ ಮೈ ನಡುಗಿಸುವಂತಿತ್ತು.

​ ಅಧಿಕಾರಿಗಳೇ, ಇದು ನಿಮ್ಮ ‘ಕುಂಭಕರ್ಣ’ ನಿದ್ದೆಯೇ ಅಥವಾ ಕುಮ್ಮಕ್ಕೇ?
​ಪಾವಗಡ ಪಟ್ಟಣದಲ್ಲಿ ಇರುವ ನಗರ ಪೊಲೀಸ್ ಠಾಣೆ. ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಯ ಹಾಗೂ ಭೂ ವಿಜ್ಞಾನ ಇಲಾಖೆಯ. ಮತ್ತು ಆರ್ ಟಿ ಓ ಇಲಾಖೆಯ ಅಧಿಕಾರಿಗಳಿಗೆ ಈ ದಂದೆಯ ಸಂಪೂರ್ಣ ಮಾಹಿತಿ ಇದ್ದರೂ, ‘ನೋಡದವರಂತೆ’ ಮೌನಕ್ಕೆ ಶರಣಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
​”ನದಿಯ ಮರಳು ಲೂಟಿಯಾಗುತ್ತಿದ್ದರೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಯಾಕೆ?

ಪ್ರತಿ ಟ್ರ್ಯಾಕ್ಟರ್‌ಗೆ ಇಂತಿಷ್ಟು ಅಂತ ಫಿಕ್ಸ್ ಆಗಿದೆಯೇ?” – ಇದು ಸಾರ್ವಜನಿಕರ ನೇರ ಪ್ರಶ್ನೆ.

​ಇಷ್ಟೆಲ್ಲಾ ಸಾಕ್ಷ್ಯಧಾರಗಳು ಕಣ್ಣಮುಂದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಸಾರ್ವಜನಿಕರೇ ಬೀದಿಗಿಳಿಯುವುದು ಖಚಿತ.ವಾಹನ ಸಂಖ್ಯೆ KA 06 TC 8547 ಮಾಲೀಕ ಹಾಗೂ ಚಾಲಕನ ವಿರುದ್ಧ ಕೂಡಲೇ FIR ದಾಖಲಾಗಲಿ.
​ಅಕ್ರಮ ಸಾಗಾಣಿಕೆಗೆ ಸಾಥ್ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳು ತನಿಖೆ ನಡೆಸಲಿ.

​ವರದಿ: ಶಿವಾನಂದ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!