Ad imageAd image

ಸಸಿ ನೆಟ್ಟು ಮೋದಿ ಜನ್ಮದಿನ ಆಚರಣೆ

Bharath Vaibhav
ಸಸಿ ನೆಟ್ಟು ಮೋದಿ ಜನ್ಮದಿನ ಆಚರಣೆ
WhatsApp Group Join Now
Telegram Group Join Now

ತುರುವೇಕೆರೆ: –ತಾಲೂಕಿನ ಬಾಣಸಂದ್ರದ ಶಾಕಾಂಬರಿ ಪೆಟ್ರೋಲ್ ಬಂಕ್ ಮಾಲೀಕರು, ಬಿಜೆಪಿ ಮುಖಂಡರೊಡಗೂಡಿ ತಮ್ಮ ಬಂಕ್ ಆವರಣದಲ್ಲಿ ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ಆಚರಿಸಿದರು.

ಗಿಡ ನೆಡುವ ಮೂಲಕ ಮೋದಿಯವರ ಜನ್ಮದಿನ ಆಚರಣೆಗೆ ಚಾಲನೆ ನೀಡಿದ ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಎಲ್ಲಾ ಕ್ಷೇತ್ರದಲ್ಲೂ ಹಿಂದೆಂದೂ ಕಾಣದ ರೀತಿಯಲ್ಲಿ ಪ್ರಗತಿಯನ್ನು ಸಾಧಿಸಿದೆ. ವಿಶ್ವ ಭೂಪಟದಲ್ಲಿ ಭಾರತ ವಿಶ್ವಗುರುವಾಗುವತ್ತ ದಿಟ್ಟ ಹೆಜ್ಜೆಯನ್ನಿರಿಸಿದೆ. ದೇಶವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಮೋದಿಯವರಿಗೆ ಇನ್ನೂ ಹೆಚ್ಚಿನ ಯಶಸ್ಸು, ಅಧಿಕಾರ ದೊರೆಯಲಿ ಎಂದು ಆಶಿಸಿದರು.

ಮೋದಿಯವರ ಜನ್ಮದಿನದ ಅಂಗವಾಗಿ ಗಿಡ‌ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿರುವ ಭಾರತೀಯ ಜನತಾ ಪಕ್ಷ ಹಾಗೂ ಸಂತೋಷ್ ಕಂಟ್ಲಿ ಅವರ ಕಾರ್ಯ ಶ್ಲಾಘನೀಯವಾದುದು. ಪರಿಸರ ಉಳಿಸಿ ಬೆಳೆಸಬೇಕಾದುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡ ನೆಟ್ಟು ಪರಿಸರ ಸಂರಕ್ಷಿಸುವ ಸಂಕಲ್ಪ ಮಾಡಬೇಕೆಂದರು.

ಮೋದಿಯವರ ಜನ್ಮದಿನದ ಅಂಗವಾಗಿ ನಾಗರೀಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಬಿಜೆಪಿ‌ ಮುಖಂಡ, ಶಾಕಾಂಬರಿ ಪೆಟ್ರೋಲ್ ಬಂಕ್ ಮಾಲೀಕ ಸಂತೋಷ್ ಕಂಟ್ಲಿ, ಮುಖಂಡರಾದ ರೇಣುಕಯ್ಯ, ಜಗದೀಶ್, ಸೋಮಶೇಖರ್, ಚಂದ್ರು, ತಿಮ್ಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!