Ad imageAd image

ಹಳಬರು ಹೋಗಿ ಹೊಸಬರು ಬರ್ತಾರೆ: ಸಂಪುಟ ವಿಸ್ತರಣೆ ಬಗ್ಗೆ ಸತೀಶ್ ಜಾರಕಿಹೊಳಿ ಮಾತು

Bharath Vaibhav
ಹಳಬರು ಹೋಗಿ ಹೊಸಬರು ಬರ್ತಾರೆ: ಸಂಪುಟ ವಿಸ್ತರಣೆ ಬಗ್ಗೆ ಸತೀಶ್ ಜಾರಕಿಹೊಳಿ ಮಾತು
satish jarkiholi
WhatsApp Group Join Now
Telegram Group Join Now

ಬೆಳಗಾವಿ: ಸಚಿವ ಸಂಪುಟ ಪುನಾರಚನೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ ಹಳಬರು ಹೋಗಿ ಹೊಸಬರು ಬರ್ತಾರೆ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಸಂಪುಟಕ್ಕೆ ಹಳಬರು ಹೋಗಿ ಹೊಸಬರು ಬರ್ತಾರೆ.

೩೦ ತಿಂಗಳ ಬಳಿಕ ಸಂಪುಟ ಪುನಾರಚನೆ ಮಾಡಬೇಕು ಅಂತಾ ಇತ್ತು. ಈ ಚರ್ಚೆ ಈಗ ಅಂತಿಮ ಹಂತಕ್ಕೆ ಬಂದಿರಬೇಕು. ಯಾರಿಗೆ ಕೊಕ್ ಕೊಡ್ತಾರೆ ಎಂಬುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

ದೆಹಲಿ ಮಟ್ಟದಲ್ಲಿ ಚರ್ಚೆ ಆಗಿದ್ದರೂ ಆಗಿರಬಹುದು. ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿ ಬಹಿರಂಗವಾಗಿ ಹೇಳಿದ್ದಾರೆ. ಹಾಗಾಗಿ ಸಿಎಂ, ಡಿಸಿಎಂ, ಹೈಕಮಾಂಡ್ಟ್ಟ ದಲ್ಲಿ ಚರ್ಚೆಯಾಗಿರಬಹುದು ಎಂದರು.

ಇನ್ನು ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗದ ಬಗ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಹೈಕಮಾಂಢೇಳಿದರೆ ಪಾಲನೆ ಮಾಡಬೇಕು ಎಂದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!