ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತು ನಾಯಕರು ಆಗಾಗ್ಗೆ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಸತೀಶ್ ಜಾರಕಿಹೊಳಿ, ಕೆ.ಎನ್ ರಾಜಣ್ಣ ಸೇರಿದಂತೆ ಹಲವರು ಕೆಪಿಸಿಸಿ ಅಧಯಕ್ಷರಾಗ್ತಾರೆ ಎಂದು ಹೇಳಲಾಗುತ್ತಿದ್ದು, ಮುಂದಿನ ಚುನಾವಣೆ ನನ್ನ ಅಧ್ಯಕ್ಷತೆಯಲ್ಲೇ ನಡೆಯಲಿದೆ ಎಂದು ಡಿ.ಕೆ ಶಿವಕುಮಾರ್ ಕೂಡಾ ಹೇಳಿಕೆ ನೀಡಿದ್ದಾಗಿದೆ.
ಡಿಕೆ ಶಿವಕುಮಾರ್ ಹೇಳಿಕೆ ಬೆನ್ನಲ್ಲೇ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡಿದ್ದಾರೆ.
ಆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನಂತೂ ಆಕಾಂಕ್ಷಿ ಅಲ್ಲ ಎಂದು ಇದೇ ವೇಳೆ ಹೇಳಿರುವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲ ಒತ್ತಡ ಇರುವುದು ಸತ್ಯ. ಆದರೆ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ
ಹುಬ್ಬಳ್ಳಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ನಾಯಕತ್ವ ಬದಲಾವಣೆಯ ಕುರಿತು ಈಗಾಗಲೇ ಹಲವಾರು ಬಾರಿ ಚರ್ಚೆಗಳು ನಡೆದಿದ್ದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರು ಆಯ್ಕೆಯಾಗುತ್ತಾರೆ ಎನ್ನಲಾಗ್ತಿದೆ ಆದರೆ ನಾನು ಈ ಸ್ಥಾನದ ಆಕಾಂಕ್ಷಿಯಲ್ಲ ಎಂದಿದ್ದಾರೆ