ಬೆಂಗಳೂರು : ರಾಜ್ಯದಲ್ಲಿ ಈ ವರ್ಷ 50 ‘ಅಕ್ಕ ಕೆಫೆ’ ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಮಹಿಳೆಯರನ್ನು ಸ್ವಾವಲಂಬಿ ಹಾಗೂ ಉದ್ಯಮಶೀಲರನ್ನಾಗಿ ಮಾಡುವಲ್ಲಿ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿದೆ.
ಅಕ್ಕ ಕಥೆ ಮೂಲಕ ಮಹಿಳೆಯರೇ ನಡೆಸುವ ಕ್ಯಾಂಟೀನ್ಗಳನ್ನು ಸ್ಥಾಪಿಸಿ, ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ – ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸಲಾಗುತ್ತಿದೆ.
ಈ ಆರ್ಥಿಕ ವರ್ಷದಲ್ಲಿ 50 ಅಕ್ಕ ಕಥೆ ಸ್ಥಾಪಿಸುತ್ತಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಶರಣ ಪುಕಾಶ್ ಪಾಟೀಲ್ ತಿಳಿಸಿದ್ದಾರೆ.