Ad imageAd image

ಬಿಹಾರ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ : ಸಿದ್ದರಾಮಯ್ಯ ಆರೋಪ 

Bharath Vaibhav
ಬಿಹಾರ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ : ಸಿದ್ದರಾಮಯ್ಯ ಆರೋಪ 
WhatsApp Group Join Now
Telegram Group Join Now

ಬೆಂಗಳೂರು : ಬಿಹಾರ್ ಚುನಾವಣೆಯಲ್ಲಿ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಬಹುತೇಕ ಮತ್ತೊಮ್ಮೆ ನಿತೀಶ್ ಕುಮಾರ್ ಸಿಎಂ ಆಗೋದು ಪಕ್ಕಾ ಎಂದೇ ಹೇಳಲಾಗುತ್ತಿದೆ.

ಈ ಚುನಾವಣೆ ಕುರಿತು ಸಿಎಂ ಸಿದ್ದರಾಮಯ್ಯ ಬಿಹಾರ್ ದಲ್ಲೂ ಮತಗಳ್ಳತನ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.

ಬೆಂಗಳೂರಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿಯೂ ವೋಟ್ ಚೋರಿ ಆಗಿದೆ. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕು.

ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತಾಡ್ತೀನಿ. ಯಾಕೆ ಜನ ವೋಟ್ ಹಾಕಿಲ್ಲ, NDA ಯಾಕೆ ಇಷ್ಟು ದೊಡ್ಡ ಬಹುಮತದಲ್ಲಿದೆ ಎನ್ನೋದು ಗೊತ್ತಿಲ್ಲ ಎಂದರು.

ಇದೇ ವೇಳೆ ಮುಧೋಳದಲ್ಲಿ ಕಬ್ಬು ಗಲಾಟೆ ವಿಚಾರವಾಗಿ ಮಾತನಾಡಿ, ಬೇರೆ ಎಲ್ಲಾ ರೈತರು 3,300 ರೂ. ಕಬ್ಬು ರೇಟ್ ಪಡೆಯೋಕೆ ಒಪ್ಪಿಕೊಂಡಿದ್ದಾರೆ. ಆದರೆ ಮುಧೋಳ ರೈತರು ಮಾತ್ರ ಒಪ್ಪಿಕೊಂಡಿಲ್ಲ. ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ.

ಯಾರು ಕಬ್ಬು, ಟ್ರ‍್ಯಾಕ್ಟರ್, ಟ್ರಾಲಿಗಳನ್ನ ಸುಟ್ಟಿ ಹಾಕಿದ್ದಾರೆ ಅಂತ ವಿಚಾರಣೆ ಮಾಡಿಸೋಣ. ರೈತರು ನಾವು ಸುಟ್ಟಿಲ್ಲ ಅಂತ ಹೇಳ್ತಿದ್ದಾರೆ. ಅದಕ್ಕಾಗಿಯೇ ವಿಚಾರಣೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ತೀವಿ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!