Ad imageAd image
- Advertisement -  - Advertisement -  - Advertisement - 

ಇಂದು ಬೆಳಗಾವಿಗೆ ಸಿದ್ದರಾಮಯ್ಯ : ರಾಯಣ್ಣನ ಮೂರ್ತಿ ಲೋಕಾರ್ಪಣೆ 

Bharath Vaibhav
ಇಂದು ಬೆಳಗಾವಿಗೆ ಸಿದ್ದರಾಮಯ್ಯ : ರಾಯಣ್ಣನ ಮೂರ್ತಿ ಲೋಕಾರ್ಪಣೆ 
siddaramaiah
WhatsApp Group Join Now
Telegram Group Join Now

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ, ಗೋಕಾಕ್, ಮೂಡಲಗಿ ತಾಲೂಕಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ತಿಂಗಳಲ್ಲಿ ಎರಡನೇ ಸಲ ಗೋಕಾಕ್ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.ಬೆಳಿಗ್ಗೆ 11:45 ಕ್ಕೆ ಬೆಳಗಾವಿ ಏರ್ಪೋರ್ಟ್ ಗೆ ಆಗಮಿಸಲಿದ್ದು, ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ಗೋಕಾಕ್ ತಾಲೂಕಿನ ಕೌಜಲಗಿಗೆ ಭೇಟಿ ನೀಡಲಿದ್ದಾರೆ.

ಬಳಿಕ ಕುರುಬ ಸಂಘದ ರಾಜ್ಯ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಫಾರ್ಮ್ ಹೌಸ್ ಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದು ನಂತರ ಕಳ್ಳುಗುದ್ದಿ, ಯಾದವಾಡ, ಕಲ್ಲೋಳಿಗೆ ಭೇಟಿ ನೀಡಲಿದ್ದಾರೆ.ಅಲ್ಲಿ ಕೂಡ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.ಅದಾದ ಬಳಿಕ ಸಂಜೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.

 

 

 

 

WhatsApp Group Join Now
Telegram Group Join Now
Share This Article
error: Content is protected !!