ಕೂಡ್ಲಿಗಿ: ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ಮನೆಯ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಕೆತ್ತನೆ ಮಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರ್ವತಮ್ಮ ಅವರಿಗೆ ₹ 30 ಸಾವಿರ ಸಂದಾಯವಾಗಿತ್ತು.ಅದನ್ನು ಯಾವುದಕ್ಕೂ ಬಳಸಿರಲಿಲ್ಲ. ಈಗ ಅದನ್ನು ಬಳಸಿ ಬಾಗಿಲಿಗೆ ಸಿದ್ದರಾಮಯ್ಯ ಚಿತ್ರ ಕೆತ್ತಿಸಲಾಗಿದೆ.
ಇದಕ್ಕೆ ₹ 28 ಸಾವಿರ ಖರ್ಚಾಯಿತು. ಇದೆಲ್ಲವೂ ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನದಿಂದ ಮಾಡಿದ್ದು’ ಎಂದು ಮಲ್ಲೇಶಪ್ಪ ತಿಪ್ಪೇಸ್ವಾಮಿ ತಿಳಿಸಿದರು.
‘ಹಳೇ ಬಾಗಿಲನ್ನು ತೆಗೆದು ಹಾಕಿ, ಸಿದ್ದರಾಮಯ್ಯ ಅವರ ಭಾವಚಿತ್ರವಿರುವ ಹೊಸ ಬಾಗಿಲು ಮನೆಗೆ ಅಳವಡಿಸಿದ್ದೇವೆ. ಊರಲ್ಲಿ ಹಬ್ಬವಿರುವ ಕಾರಣಕ್ಕೆ ಪೂಜೆ ಸಲ್ಲಿಸಿದೆವು’ ಎಂದರು.




