ಬಾಗಲಕೋಟೆ :ಮದ್ಯ ಕುಡಿಯಲು ಹಣ ಕೊಡಲಿಲ್ಲ ಎಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ.
28 ವರ್ಷದ ವೆಂಕಟೇಶ್ ಗಿರಿಸಾಗರ ಎಂಬ ಪಾಪಿ ಮಗ ತನ್ನ ತಾಯಿ ಶಾವಕ್ಕ ಗಿರಿಸಾಗರ (58) ಅವರ ಕೈಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ, ಕುತ್ತಿಗೆ ಕೊಯ್ದು ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ.
ಕುಡಿಯಲು ಹಣ ಕೊಡದ ತಾಯಿ ಶಾವಕ್ಕಳ ಕೈಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ, ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಸಂಜೆಯಾದರೂ ಶಾವಕ್ಕ ಕಾಣಿಸದಿದ್ದಾಗ ಅಕ್ಕಪಕ್ಕದವರು ಇಣುಕಿ ನೋಡಿದ್ದಾರೆ. ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿರುವುದು ಗೊತ್ತಾಗಿದೆ.
ಕೂಡಲೇ ಕಲಾದಗಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ವೆಂಕಟೇಶನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.




