Ad imageAd image

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು 

Bharath Vaibhav
ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು 
WhatsApp Group Join Now
Telegram Group Join Now

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಪ್ರವಾಸಿಗರು ಮೃತಪಟ್ಟಿದ್ದಾರೆ.

ಪ್ರವಾಸಕ್ಕೆ ತೆರಳಿದ ಹುಬ್ಬಳ್ಳಿಯ ನಜೀರ್ ಅಹ್ಮದ್(40), ಅಲ್ಫಿಯಾ ಅಹಮದ್(10), ಮೋಹಿನ್ (6), ಇಫ್ರಾ ಅಹಮದ್(15), ಹಬೀದ್ ಅಹಮ್ಮದ್(12), ರೇಷ್ಮಾ ಉನ್ನೀಸಾ(38) ಮೃತಪಟ್ಟವರು ಎಂದು ಹೇಳಲಾಗಿದೆ.

ಊಟ ಮಾಡಿದ ಬಳಿಕ ವಿಶ್ರಾಂತಿ ಪಡೆಯುವಾಗ ಮಗುವೊಂದು ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದಿದ್ದು, ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರು ಹುಬ್ಬಳ್ಳಿಯ ಈಶ್ವರ ನಗರ ನಿವಾಸಿಗಳು. ಒಟ್ಟು ಎಂಟು ಮಂದಿ ಪ್ರವಾಸಕ್ಕೆ ತೆರಳಿದ್ದರು. ಇಬ್ಬರು ಮಹಿಳೆಯರು ನೀರಿಗೆ ಇಳಿದಿರಲಿಲ್ಲ ಎಂದು ಹೇಳಲಾಗಿದೆ.

ಆರು ಜನರ ಮೃತದೇಹಗಳನ್ನು ನದಿಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!