Ad imageAd image

ಮಹಾ ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ದುರ್ಮರಣ

Bharath Vaibhav
ಮಹಾ ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ದುರ್ಮರಣ
WhatsApp Group Join Now
Telegram Group Join Now

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್ ನ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟ ಸುದ್ದಿ ಮಾಸುವ ಮುನ್ನವೇ ಈಗ ಮಹಾ ಕಂಭಮೇಳಕ್ಕೆ ಹೊರಟಿದ್ದು ಬೆಳಗಾವಿಯ ನಾಲ್ವರು ಸೇರಿ ಆರು ಜನ ದುರ್ಮರಣಕ್ಕೀಡಾದ ಘಟನೆ ಫೆ.7ರ ಶುಕ್ರವಾರ ಬೆಳಗಿನ ಜಾವ ಮಧ್ಯಪ್ರದೇಶದ ಇಂದೋರ್ ಸಮೀಪದ ಮಾಣಪುರ ಬಳಿ ಸಂಭವಿಸಿದೆ.

ಬೆಳಗಾವಿಯ ಗಣೇಶಪುರದ ನಾಲ್ವರು ನಿವಾಸಿಗಳು ಸಾಗರ ಮತ್ತು ನೀತಾ ಮೃತಪಟ್ಟಿದ್ದು, ಇನ್ನುಳಿದ ನಾಲ್ವರ ಹೆಸರು ಇನ್ನೂ ಖಚಿತ ಪಟ್ಟಿಲ್ಲ. ಇವರಲ್ಲಿ ಇಬ್ಬರು ಇಂದೋರ್ ನಿವಾಸಿಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯಪ್ರದೇಶದ ಇಂದೂರು ಬಳಿ ರಸ್ತೆ ಅಪಘಾತದಲ್ಲಿ ಈ ದುರ್ಘಟನ ಸಂಭವಿಸಿದೆ. ಬೆಳಗಾವಿಯ ನಾಲ್ವರು ಸೇರಿ ಹಾಗೂ ದ್ವಿಚಕ ವಾಹನದಲಿದ್ದ ಇಂದೋರ್ ನಿವಾಸಿಗಳು ಮೃತಪಟ್ಟಿರುವ ಬಗ್ಗೆ ತಿಳಿದು
ಬಂದಿದೆ.

ಬೆಳಗಾವಿಯಿಂದ ಮಹಾ ಕುಂಭಮೇಳಕ್ಕೆ ಹೊರಟಿದ್ದ 19 ಜನರ ತಂಡದಲ್ಲಿ ನಾಲ್ವರು ಮೃತಪಟ್ಟಿರುವ ಮಾಹಿತಿ ಬಂದಿದೆ. ಇಂದು (ಫೆ.7) ಬಿಜೆಪಿ ಜಿಲ್ಲಾಧ್ಯಕ್ಷ ಮಿಶ್ರಾ ಅವರು ಗಾಯಾಳುಗಳ ಆರೈಕೆಯಲ್ಲಿ ತೊಡಗಿದ್ದಾರೆ. ಈಗಾಗಲೇ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ.
16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಎಂ.ಜಿ.ಎಂ. ಆಸ್ಪತ್ರೆಯ ಅಧೀಕ್ಷಕ ಹಾಗೂ ಜಂಟಿ ನಿರ್ದೇಶಕ ಡಾ. ಅಶೋಕ ಯಾದವ್‌ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!