ಕಲಬುರಗಿ : ನಗರದ ಹೆರಿಟೇಜ್ ಹೋಟೆಲ್ ನಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್ ಅವರ ನೇತೃತ್ವದಲ್ಲಿ ಜೆಡಿಎಸ್ ಸಾಮಾಜಿಕ ಜಾಲತಾಣ ಕಾರ್ಯಾಗಾರ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ರಾಜ್ಯಾಧ್ಯಕ್ಷರು ಮಾತನಾಡಿ ಸೋಶಿಯಲ್ ಮೀಡಿಯಾದಲ್ಲಿ ಯಾವರೀತಿ ಪೋಸ್ಟ್ ಗಳನ್ನ ಮಾಡಬೇಕು ಎಂದು ವಿವರಣೆ ನೀಡಿದರು.
ಇದೇ ವೇಳೆ ರಾಜ್ಯಕಾರ್ಯದರ್ಶಿಗಳು ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ವಿವರವಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್, ಶಿವು ನಾಟಿಕರ್, ಕೃಷ್ಣಾರೆಡ್ಡಿ ಸೇರಿದಂತೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




