ವಿಜಯಪುರ: ತಲೆಗೆ ಗುಂಡು ಹಾರಿಸಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಶಿಕಾರಿ ಖಾನ ಪ್ರದೇಶದಲ್ಲಿ ಜರುಗಿದೆ. ಅಶನಾಮ್ ಪ್ರಕಾಶ ಮಿರ್ಜಿ (22) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.
ಈತನು ತನ್ನ ತಂದೆ ಹಾಗೂ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್ ಮಿರ್ಜಿ ಅವರ ಹೆಸರಿನಲ್ಲಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್ ಅನ್ನು ತೆಗೆದುಕೊಂಡು ಬೆಡ್ ರೂಂಗೆ ಹೋಗಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ತಂದೆ-ತಾಯಿ ಹಾಗೂ ಇತರರು ಮನೆಯಲ್ಲಿ ಇದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಗುಂಡಿನ ಶಬ್ದ ಕೇಳುತ್ತಲೇ ಪೋಷಕರು ಬಾಗಿಲು ತೆರೆದು ಆತನನ್ನು ಬಿಎಲ್ಡಿಇ ಆಸ್ಪತ್ರೆಗೆ ಸೇರಿಸಿದ್ದು, ಅದಾಗಲೇ ಯುವಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.