ಬೆಂಗಳೂರು : ಶ್ರೀರಾಮನ ಆದರ್ಶಗಳು ಈಗಿನ ಪೀಳಿಗೆಗೆ ಮತ್ತು ಹಿಂದೂ ಧರ್ಮಕ್ಕೆ ಪ್ರೇರಣೆ ಎಂದು ಶಾಸಕ ಎಸ್ ಮುನಿರಾಜು ಹೇಳಿದರು.
ಅವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಚಿಕ್ಕಸಂದ್ರದ ಬಿಜೆಪಿ ಯುವ ಮುಖಂಡ ಹಾಗೂ ರಿಯಲ್ ಎಸ್ಟೇಟ್ ಏಜೆನ್ಸಿ ಮಾಲೀಕ ಮೋಹನ್ ಮತ್ತು ಕುಟುಂಬದ ಸದಸ್ಯರ ನೇತ್ರತ್ವದಲ್ಲಿ ಶ್ರೀರಾಮ ಜಯಂತೋತ್ಸವ ಆಯೋಜಿಸಲಾಗಿತ್ತು.
ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಪುನಸ್ಕಾರ ಸಲ್ಲಿಸಿ ದೇವರ ದರ್ಶನ ಪಡೆದು ನಮ್ಮ ಭಾರತೀಯ ಸಂಸ್ಕೃತಿ ಸಂಪ್ರದಾಯ ಪರಂಪರೆಯನ್ನು ಕಾಪಾಡಿಕೊಂಡು ಬರುತ್ತಿರುವ ನಮ್ಮ ಬಿಜೆಪಿ ಯುವ ಮುಖಂಡ ಮೋಹನ್ ಇಂತಹ ಕಾರ್ಯಕ್ರಮಗಳು ಮಾಡುವುದರಿಂದ ಈಗಿನ ಪೀಳಿಗೆಗೆ ಹಿಂದೂ ಧರ್ಮದ ಬಗ್ಗೆ ಅರಿವು ಮೂಡಿಸಿ ದಾರಿಯಾಗುತ್ತದೆ ಎಂದು ಶಾಸಕ ಎಸ್ ಮುನಿರಾಜು ಪಾನಕಾ ಮಜ್ಜಿಗೆ ಕೊಸಂಬರಿ ವಿತರಿಸಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಸಮಸ್ತ ನಾಗರಿಕರು ಮಹಿಳೆಯರು ಮುಂತಾದವರು ಇದ್ದರು.
ವರದಿ : ಅಯ್ಯಣ ಮಾಸ್ಟರ್




